ಬ್ರೇಕಿಂಗ್ ನ್ಯೂಸ್
07-09-25 08:33 pm HK News Desk ದೇಶ - ವಿದೇಶ
ನವದೆಹಲಿ, ಸೆ.7: ಭಾರತದಲ್ಲಿ ಹಲವಾರು ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಗಡೀಪಾರು ಮಾಡುವ ಸಾಧ್ಯತೆ ಕಂಡುಬಂದಿದೆ. ಬ್ರಿಟನ್ ನಲ್ಲಿ ಅಡಗಿರುವ ಹೈ ಪ್ರೊಫೈಲ್ ವ್ಯಕ್ತಿಗಳನ್ನು ಭಾರತಕ್ಕೆ ಹಸ್ತಾಂತರಿಸುವಂತೆ, ಬ್ರಿಟನ್ ಸರ್ಕಾರವನ್ನು ಕೋರಲಾಗಿದ್ದು ಅಲ್ಲಿನ ನ್ಯಾಯಾಲಯವೂ ಒಪ್ಪಿಗೆ ನೀಡಿದೆ.
ಆರೋಪಿಗಳನ್ನು ಭಾರತಕ್ಕೆ ಹಸ್ತಾಂತರಿಸಿದರೆ ಅವರನ್ನು ತಿಹಾರ್ ಜೈಲಿನಲ್ಲಿ ವಿಶೇಷ ವ್ಯವಸ್ಥೆ ಮಾಡಿ ಇಟ್ಟುಕೊಳ್ಳುವುದಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್ ನಿಂದ ತಜ್ಞರ ತಂಡವೊಂದು ದೆಹಲಿಯ ತಿಹಾರ್ ಜೈಲಿನ ಭದ್ರತೆ ಬಗ್ಗೆ ಮಾಹಿತಿ ಸಂಗ್ರಹಿಸಿ ಹೋಗಿದೆ ಎಂದು ತಿಳಿದುಬಂದಿದೆ. ಆದರೆ ತಮ್ಮ ಗಡೀಪಾರಿನಿಂದ ತಪ್ಪಿಸಲು ಇವರಿಬ್ಬರೂ, ಭಾರತದ ಜೈಲುಗಳ ಅವ್ಯವಸ್ಥೆಯನ್ನು ಉಲ್ಲೇಖಿಸಿದ್ದರು. ಅಲ್ಲಿಗೆ ಕಳಿಸಿದರೆ ಕಾಯಿಲೆ ಬಿದ್ದು ಸಾಯುತ್ತೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬ್ರಿಟನ್ ನ್ಯಾಯಾಲಯಕ್ಕೆ ವರದಿ ನೀಡುವುದಕ್ಕಾಗಿ ಅಲ್ಲಿನ ಜೈಲು ಅಧಿಕಾರಿಗಳು ಇತ್ತೀಚೆಗೆ ತಿಹಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತದ ಜೈಲಿನ ಬಗ್ಗೆ ಆತಂಕ ವ್ಯಕ್ತವಾಗಿದ್ದರಿಂದ ಗಡೀಪಾರು ಆದೇಶ ಆಗಿದ್ದರೂ ನೀರವ್ ಮೋದಿಯನ್ನು ಬ್ರಿಟನ್ ಜೈಲಿನಲ್ಲಿಯೇ ಇರಿಸಲಾಗಿದೆ. ಇದರ ಬೆನ್ನಲ್ಲೇ ಬ್ರಿಟಿಷ್ ಅಧಿಕಾರಿಗಳು ಬಂದು ಜೈಲಿನ ಸ್ಥಿತಿಗಳ ಕುರಿತು ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ವಂಚಕರಿಗೆ ಬಯಸಿದರೆ ವಿಶೇಷ ವ್ಯವಸ್ಥೆಯನ್ನೂ ಮಾಡುವುದಾಗಿ ಭಾರತದ ಅಧಿಕಾರಿಗಳು ಭರವಸೆ ನೀಡಿದ್ದಾರೆ. ವಂಚನೆ ಎಸಗಿ ಹಲವು ದೇಶಗಳಿಗೆ ಪರಾರಿಯಾಗಿರುವ 178 ಮಂದಿ ಭಾರತೀಯರ ಗಡೀಪಾರಿಗೆ ಪ್ರಯತ್ನ ನಡೆಸಲಾಗುತ್ತಿದೆ. ಈ ಪೈಕಿ 20 ಮಂದಿ ಬ್ರಿಟನ್ ನಲ್ಲಿ ನೆಲೆಸಿದ್ದಾರೆಂದು ತಿಳಿದುಬಂದಿದೆ.
ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13800 ಕೋಟಿ ರು. ವಂಚಿಸಿದ್ದರೆ, ವಿಜಯ್ ಮಲ್ಯ ಎಸ್ಬಿಐ ಸೇರಿದಂತೆ ವಿವಿಧ ಬ್ಯಾಂಕ್ಗಳಿಗೆ 9000 ಕೋಟಿ ರು. ವಂಚಿಸಿ ಪರಾರಿಯಾಗಿದ್ದಾರೆ.
Efforts to bring back high-profile economic offenders such as Nirav Modi and Vijay Mallya from the United Kingdom have gained momentum with a team from Britain's Crown Prosecution Service (CPS) recently visiting Tihar Jail, an official said on Sunday.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm