ಬ್ರೇಕಿಂಗ್ ನ್ಯೂಸ್
08-09-25 02:02 pm HK News Desk ದೇಶ - ವಿದೇಶ
ನವದೆಹಲಿ, ಸೆ.7 : ದೃಶ್ಯಂ ಇತ್ಯಾದಿ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ಮಲಯಾಳಂ ಚಿತ್ರರಂಗದ ಖ್ಯಾತ ನಟಿ ನವ್ಯಾ ನಾಯರ್ ಮಲ್ಲಿಗೆ ಮುಡಿದುಕೊಂಡು ವಿಮಾನದಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಿದ್ದಕ್ಕೆ 1.14 ಲಕ್ಷ ರೂ. ದಂಡ ತೆರಬೇಕಾಗಿ ಬಂದಿದೆ. ಕೇವಲ 15 ಸೆಂ.ಮೀ ಉದ್ದದ ಮಲ್ಲಿಗೆ ಹೂವಿನ ಹಾರ ಮುಡಿದಿದ್ದ ನವ್ಯಾ ನಾಯರ್ ಅವರನ್ನು ಮೆಲ್ಬೋರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದ ಅಲ್ಲಿನ ಅಧಿಕಾರಿಗಳು 1.14 ಲಕ್ಷ ರೂ. (1,980 ಆಸ್ಟ್ರೇಲಿಯನ್ ಡಾಲರ್) ದಂಡ ಹಾಕಿದ್ದಾರೆ.
ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್ ಸಂಸ್ಥೆಯು ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಭಾಗವಹಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಆ ಕಾರ್ಯಕ್ರಮಕ್ಕಾಗಿ ನಾನು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಹೂವುಗಳನ್ನು ಧರಿಸಿದ್ದೆ ಎಂದು ನವ್ಯಾ ತಮಾಷೆ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
![]()

ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಡುವ ಮೊದಲು ತಂದೆ ಉಡುಗೊರೆಯಾಗಿ ನೀಡಿದ ಮಲ್ಲಿಗೆ ಹಾರವನ್ನು ಧರಿಸಿದ್ದೆ. ಆ ದೇಶದ ನಿಯಮಗಳ ಅರಿವಿಲ್ಲದೆ ಹೀಗಾಗಿದೆ. ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂ ತೆಗೆದುಕೊಂಡು ಹೋಗಬಾರದು ಎಂದು ಯಾರೂ ಹೇಳಿರಲಿಲ್ಲ. ಇದು ದಂಡ ತೆರುವುದಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಆ ದೇಶದ ಸ್ಥಳೀಯ ಸಸ್ಯ ಮತ್ತು ಪ್ರಾಣಿಗಳನ್ನು ರಕ್ಷಿಸಲು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಅಲ್ಲಿನ ನಿಯಮಗಳ ಪ್ರಕಾರ ವಿದೇಶಿ ಸಸ್ಯಗಳು, ಹೂವು ಅಥವಾ ಪ್ರಾಣಿಗಳನ್ನು ಆ ದೇಶಕ್ಕೆ ಕೊಂಡೊಯ್ಯುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ಅಲ್ಲಿನ ಸ್ಥಳೀಯ ಪ್ರಭೇದಗಳಿಗೆ ಅಪಾಯ ಉಂಟುಮಾಡುತ್ತದೆ ಎಂದು ಆಸ್ಟ್ರೇಲಿಯಾ ಸರ್ಕಾರದ ಕೃಷಿ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಈ ನಿಯಮ ತಂದಿದೆ. ಅಲ್ಲಿನ ಸಚಿವಾಲಯದ ಪ್ರಕಾರ, ಯಾವುದೇ ವಿದೇಶಿ ಸಸ್ಯ ಅಥವಾ ಪ್ರಾಣಿಗಳನ್ನು ಸರಿಯಾದ ತಪಾಸಣೆಯ ನಂತರ ಮಾತ್ರ ಆ ದೇಶಕ್ಕೆ ತರಬೇಕು. ನವ್ಯಾ ನಾಯರ್ ಈ ನಿಯಮ ಪಾಲಿಸಿಲ್ಲವಾದ್ದರಿಂದ ಆಕೆ 28 ದಿನಗಳಲ್ಲಿ ದಂಡ ಪಾವತಿಸುವಂತೆ ಸೂಚಿಸಲಾಗಿದೆ.
Malayalam actor Navya Nair was reportedly fined AUD 1,980 (around ₹1.14 lakh) at Melbourne International Airport after officials found her carrying a jasmine gajra.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm