ಬ್ರೇಕಿಂಗ್ ನ್ಯೂಸ್
08-09-25 06:07 pm HK News Desk ದೇಶ - ವಿದೇಶ
ನವದೆಹಲಿ, ಸೆ.8 : ಕೈದಿಯೊಬ್ಬ ನಿಗದಿತ ಏಳು ವರ್ಷಗಳ ಶಿಕ್ಷೆ ಪೂರ್ಣಗೊಳಿಸಿದ ಬಳಿಕವೂ ಅಧಿಕಾರಿಗಳು ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳ ಕಾಲ ಜೈಲಿನಲ್ಲಿರಿಸಿದ್ದಕ್ಕೆ ಪ್ರತಿಯಾಗಿ 25 ಲಕ್ಷ ರು. ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು, ಪ್ರಕರಣ ಸಂಬಂಧಿಸಿ ಮಧ್ಯಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಲ್ಲದೆ, ವ್ಯಕ್ತಿಗೆ ಪರಿಹಾರ ನೀಡಲು ಆದೇಶಿಸಿದೆ. ಅಪರಾಧಿ ಸೋಹನ್ ಸಿಂಗ್ ಪರ ವಾದ ಮಂಡಿಸಿದ ವಕೀಲ ಮಹ್ಫೂಜ್ ನಜ್ಕಿ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪೂರ್ಣಗೊಂಡ ನಂತರವೂ ನಾಲ್ಕು ವರ್ಷ ಏಳು ತಿಂಗಳು ಹೆಚ್ಚುವರಿಯಾಗಿ ಜೈಲಿನಲ್ಲಿ ಕಳೆದಿದ್ದಾರೆ. ಅವರು ಒಟ್ಟು 11 ವರ್ಷ 7 ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ಕೇವಲ 7 ವರ್ಷಗಳಾದರೂ ಹೆಚ್ಚುವರಿಯಾಗಿ ಜೈಲಿನಲ್ಲಿ ಇರಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ.
ತಪ್ಪು ದಾರಿಗೆಳೆಯುವ ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ರಾಜ್ಯ ಸರ್ಕಾರದ ಪರ ವಕೀಲರನ್ನು ತರಾಟೆಗೆ ತೆಗೆದಿದ್ದಲ್ಲದೆ, 25 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತು. ಇದೇ ರೀತಿ ಅಕ್ರಮವಾಗಿ ಜೈಲಿನಲ್ಲಿ ಯಾರನ್ನಾದರೂ ಇರಿಸಲಾಗಿದೆಯೇ ಎಂದು ಪರಿಶೀಲಿಸಲು ಮಧ್ಯಪ್ರದೇಶ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತು. ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಅಪರಾಧಿಗಳನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಹೇಳಿದೆ.
ಇದಕ್ಕೂ ಮೊದಲು ಏಳು ವರ್ಷಗಳ ಸಂಪೂರ್ಣ ಶಿಕ್ಷೆಯನ್ನು ಅನುಭವಿಸಿದ ನಂತರವೂ ನಾಲ್ಕು ವರ್ಷ ಹೆಚ್ಚು ಕಾಲ ಜೈಲಿನಲ್ಲಿ ಏಕೆ ಇದ್ದರು ಮತ್ತು ಅಂತಹ ಗಂಭೀರ ಲೋಪ ಹೇಗೆ ಸಂಭವಿಸಿತು ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ಆಗಸ್ಟ್ 22 ರಂದು ರಾಜ್ಯ ಸರ್ಕಾರಕ್ಕೆ ವರದಿ ಕೇಳಿತ್ತು. ಸರ್ಕಾರದ ಪರ ವಕೀಲರ ವರದಿ ಮತ್ತು ತಪ್ಪಾದ ಅಫಿಡವಿಟ್ ನೋಡಿ ಗರಂ ಆಗಿರುವ ನ್ಯಾಯಪೀಠವು ಸರ್ಕಾರಕ್ಕೆ ಛೀಮಾರಿ ಹಾಕಿದ್ದಲ್ಲದೆ, 25 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.
In a strong rebuke to the Madhya Pradesh government, the Supreme Court on Monday directed the state to pay ₹25 lakh in compensation to a man who was wrongfully kept in prison for four years and seven months beyond his legally mandated sentence.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm