ಬ್ರೇಕಿಂಗ್ ನ್ಯೂಸ್
08-09-25 10:59 pm HK News Desk ದೇಶ - ವಿದೇಶ
ನವದೆಹಲಿ, ಸೆ.8 : ನೇಪಾಳ ಸರ್ಕಾರವು ಜಾಲತಾಣಗಳಾದ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಎಕ್ಸ್ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಿದ ಬೆನ್ನಲ್ಲೇ ದೇಶಾದ್ಯಂತ ಯುವಜನರ ಆಕ್ರೋಶ ಭುಗಿಲೆದ್ದಿದೆ. ಜನರು ಬೀದಿಗಿಳಿದು ಹಿಂಸೆಗೆ ಇಳಿದಿದ್ದು ಪೊಲೀಸರ ಜೊತೆಗಿನ ಸಂಘರ್ಷದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಯುವಕರು ರೀಲ್ಸ್ ಮಾಡುವುದಕ್ಕೆ ನೇಪಾಳ ಸರ್ಕಾರ ಕಡಿವಾಣ ಹಾಕಿದ್ದು ಇದನ್ನು ವಿರೋಧಿಸಿ ಯುವಜನತೆ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದೆ. ಜನರು ಸರ್ಕಾರದ ಬಗ್ಗೆ ಪ್ರಶ್ನೆ ಮಾಡುತ್ತಲೇ ಇತ್ತ ಉದ್ರಿಕ್ತರ ನಿಯಂತ್ರಣಕ್ಕೆ ಸೇನೆಯನ್ನು ನಿಯೋಜಿದ್ದು ಕರ್ಫ್ಯೂ ವಿಧಿಸಲಾಗಿದೆ.






ರಾಜಧಾನಿ ಕಾಠ್ಮಂಡುವಿನಲ್ಲಿ ಸಂಸತ್ತಿನ ಮೇಲೆ ಉದ್ರಿಕ್ತ ಯುವಕರು ದಾಳಿ ನಡೆಸಿದ್ದು ಅವರನ್ನು ಚದುರಿಸಲು ಲಾಟಿ ಚಾರ್ಜ್, ಅಶ್ರುವಾಯು ಪ್ರಯೋಗಿಸಿದ್ದಾರೆ. ಅಲ್ಲದೆ, ನಗರದಾದ್ಯಂತ ಕರ್ಫ್ಯೂ ಹೇರಲಾಗಿದ್ದು ಜನರನ್ನು ಹೊರಕ್ಕೆ ಬರದಂತೆ ನಿಯಂತ್ರಣ ವಿಧಿಸಲಾಗಿದೆ.
ಸೋಶಿಯಲ್ ಮೀಡಿಯಾ ಮೂಲಕ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ, ಅದರಿಂದ ಕ್ರೈಮ್ ಹೆಚ್ಚುತ್ತಿದೆ ಎಂಬ ನೆಪದಲ್ಲಿ ನೇಪಾಳ ಸರ್ಕಾರ ಸಾಮಾಜಿಕ ವೇದಿಕೆಗಳನ್ನು ನಿಷೇಧಿಸಿದೆ. ಇದರ ಬೆನ್ನಲ್ಲೇ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಭ್ರಷ್ಟಾಚಾರ ನಿಲ್ಲಿಸಿ, ಸೋಶಿಯಲ್ ಮೀಡಿಯಾವನ್ನಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗಿದ್ದು ಭಾರತದ ಗಡಿಭಾಗದಲ್ಲಿ ಕಟ್ಟೆಚ್ಚರ ವಿಧಿಸಲಾಗಿದೆ. ಹಿಂಸೆ ಹೆಚ್ಚಿದ ಹಿನ್ನೆಲೆಯಲ್ಲಿ ನೇಪಾಳದ ಕೆಪಿ ಓಲಿ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚಿದೆ. ಇದರಿಂದಾಗಿ ಗೃಹ ಸಚಿವ ರಮೇಶ್ ಲೇಖಕ್ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದಾರೆ.
Widespread chaos has gripped Nepal after the government imposed a ban on 26 major social media platforms, including Facebook, YouTube, Instagram, and X (formerly Twitter). The move triggered massive outrage, particularly among the youth, leading to violent protests, clashes with security forces, and the death of at least 19 people. Over 500 others have been reported injured.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am