ಬ್ರೇಕಿಂಗ್ ನ್ಯೂಸ್
14-09-25 07:31 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಭೂಕಂಪ ಸಂಭವಿಸಿದ್ದು, ಪಕ್ಕದ ಉತ್ತರ ಬಂಗಾಳ ಮತ್ತು ಭೂತಾನ್ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭಾನುವಾರ ಸಂಜೆ 4.41ರ ಸುಮಾರಿಗೆ ಗುವಾಹತಿಯಲ್ಲಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಹಾಗೂ ಆಸ್ತಿ ನಷ್ಟದ ವರದಿಯಾಗಿಲ್ಲ.
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಭೂಕಂಪನದ ಅನುಭವ ಆಗಿದೆ. ಗುವಾಹಟಿ ಬಳಿಯ ಉದೈಗುರಿ ಎಂಬಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಮತ್ತು 5 ಕಿಮೀ ಆಳದಲ್ಲಿತ್ತು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ. ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಾಂತ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂ ಭೂಕಂಪ ತೀವ್ರತೆಯ ಪ್ರದೇಶವಾಗಿದ್ದು, ಹಿಮಾಲಯದ ತಪ್ಪಲು ಪ್ರದೇಶವಾಗಿರುವ ಕಾರಣ ಭೂಕಂಪದಂತ ಪ್ರಕೃತಿ ವಿಕೋಪಗಳು ಇಲ್ಲಿ ವರದಿಯಾಗುತ್ತಿರುತ್ತವೆ ಎಂದು ತಜ್ಞರು ಹೇಳುತ್ತಾರೆ. ಇದೇ ಸೆ.2ರಂದು ಅಸ್ಸಾಂ ರಾಜ್ಯದ ಸೋನಿತ್ ಪುರ್ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಪದೇ ಪದೇ ಲಘು ಕಂಪನ ಆಗುತ್ತಿರುವುದು ದೊಡ್ಡ ಘಟನೆಯ ಮುನ್ಸೂಚನೆಯೇ ಎನ್ನುವ ಆತಂಕ ಇದೆ. ಇತ್ತೀಚೆಗಷ್ಟೇ ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ ಉಂಟಾಗಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
A 5.8 magnitude earthquake jolted Assam's Guwahati at 4:41 pm, with tremors felt as far as North Bengal and neighbouring Bhutan. The quake had a depth of 5 kilometers and its epicenter was in the town of Udalguri, according to India's National Center for Seismology. Terrified residents rushed outside their homes in Guwahati. No reports of injury or damage to property have been received so far.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm