ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm