ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm