ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am