ಬ್ರೇಕಿಂಗ್ ನ್ಯೂಸ್
15-09-25 04:57 pm HK News Desk ದೇಶ - ವಿದೇಶ
ನವದೆಹಲಿ, ಸೆ.15 : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕೆಲವು ಅಂಶಗಳಿಗೆ ತಡೆ ಹೇರಿ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ. ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆ ಮೂರಕ್ಕಿಂತ ಹೆಚ್ಚಿರಬಾರದು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ ವಕ್ಫ್ ಮಂಡಳಿಯ ಸದಸ್ಯರಾಗಲು ಕನಿಷ್ಠ ಐದು ವರ್ಷ ಇಸ್ಲಾಂ ಧರ್ಮವನ್ನು ಅನುಸರಿಸಿರಬೇಕೆಂಬ ಷರತ್ತನ್ನು ನ್ಯಾಯಾಲಯ ತಡೆಹಿಡಿದಿದೆ. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವ ವರೆಗೆ ಈ ನಿಬಂಧನೆಯನ್ನು ಜಾರಿಗೊಳಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದಲ್ಲದೆ, ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ವಿಭಾಗದ ದಾಖಲೆಗಳ ಸಂಗ್ರಹಕ್ಕೂ ತಡೆಹಿಡಿಯಲಾಗಿದೆ.
ವಕ್ಫ್ ಕಾಯ್ದೆಯ ಸೆಕ್ಷನ್ 3 ಮತ್ತು 4 ಅನ್ನು ನ್ಯಾಯಾಲಯ ತಡೆ ಹೇರಿದ್ದು, ಆದರೆ ಸಂಪೂರ್ಣ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಕ್ಫ್ ಮಂಡಳಿಯ ಸಿಇಒ ಆಗುವ ವ್ಯಕ್ತಿ ಮುಸ್ಲಿಂ ಸಮುದಾಯದ್ದೇ ಆಗಿರಬೇಕು ಎಂದು ನ್ಯಾಯಾಲಯ ಹೇಳಿದೆ. ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಪ್ರಕಾರ ಒಬ್ಬ ವ್ಯಕ್ತಿಯು ವಕ್ಫ್ ರಚಿಸಲು ಕನಿಷ್ಠ 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಸರಣೆ ಮಾಡಿರಬೇಕು. ಒಬ್ಬ ವ್ಯಕ್ತಿ ಇಸ್ಲಾಂ ಧರ್ಮದ ಅನುಯಾಯಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ಸ್ಪಷ್ಟ ನಿಯಮಗಳನ್ನು ರೂಪಿಸುವ ವರೆಗೆ ಮೇಲಿನ ನಿಷೇಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.
The Supreme Court has issued an interim order on the Waqf Amendment Act brought by the Central Government, refusing to strike down the law entirely but staying the implementation of certain provisions.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am