ಬ್ರೇಕಿಂಗ್ ನ್ಯೂಸ್
15-09-25 04:57 pm HK News Desk ದೇಶ - ವಿದೇಶ
ನವದೆಹಲಿ, ಸೆ.15 : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕೆಲವು ಅಂಶಗಳಿಗೆ ತಡೆ ಹೇರಿ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ. ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆ ಮೂರಕ್ಕಿಂತ ಹೆಚ್ಚಿರಬಾರದು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ ವಕ್ಫ್ ಮಂಡಳಿಯ ಸದಸ್ಯರಾಗಲು ಕನಿಷ್ಠ ಐದು ವರ್ಷ ಇಸ್ಲಾಂ ಧರ್ಮವನ್ನು ಅನುಸರಿಸಿರಬೇಕೆಂಬ ಷರತ್ತನ್ನು ನ್ಯಾಯಾಲಯ ತಡೆಹಿಡಿದಿದೆ. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವ ವರೆಗೆ ಈ ನಿಬಂಧನೆಯನ್ನು ಜಾರಿಗೊಳಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದಲ್ಲದೆ, ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ವಿಭಾಗದ ದಾಖಲೆಗಳ ಸಂಗ್ರಹಕ್ಕೂ ತಡೆಹಿಡಿಯಲಾಗಿದೆ.
ವಕ್ಫ್ ಕಾಯ್ದೆಯ ಸೆಕ್ಷನ್ 3 ಮತ್ತು 4 ಅನ್ನು ನ್ಯಾಯಾಲಯ ತಡೆ ಹೇರಿದ್ದು, ಆದರೆ ಸಂಪೂರ್ಣ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಕ್ಫ್ ಮಂಡಳಿಯ ಸಿಇಒ ಆಗುವ ವ್ಯಕ್ತಿ ಮುಸ್ಲಿಂ ಸಮುದಾಯದ್ದೇ ಆಗಿರಬೇಕು ಎಂದು ನ್ಯಾಯಾಲಯ ಹೇಳಿದೆ. ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಪ್ರಕಾರ ಒಬ್ಬ ವ್ಯಕ್ತಿಯು ವಕ್ಫ್ ರಚಿಸಲು ಕನಿಷ್ಠ 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಸರಣೆ ಮಾಡಿರಬೇಕು. ಒಬ್ಬ ವ್ಯಕ್ತಿ ಇಸ್ಲಾಂ ಧರ್ಮದ ಅನುಯಾಯಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ಸ್ಪಷ್ಟ ನಿಯಮಗಳನ್ನು ರೂಪಿಸುವ ವರೆಗೆ ಮೇಲಿನ ನಿಷೇಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.
The Supreme Court has issued an interim order on the Waqf Amendment Act brought by the Central Government, refusing to strike down the law entirely but staying the implementation of certain provisions.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm