ಬ್ರೇಕಿಂಗ್ ನ್ಯೂಸ್
20-09-25 11:42 am HK News Desk ದೇಶ - ವಿದೇಶ
ನವದೆಹಲಿ, ಸೆ.20: ಪಾಕಿಸ್ತಾನಕ್ಕೆ ಹೋದರೆ ನನಗೆ ಮನೆಗೆ ಹೋದ ರೀತಿಯ ಅನುಭವ ಆಗುತ್ತದೆ ಎಂದು ಕಾಂಗ್ರೆಸ್ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಹೇಳಿದ್ದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು, ''ಕೇಂದ್ರ ಸರಕಾರವು ವಿದೇಶಾಂಗ ನೀತಿಯಲ್ಲಿ ನೆರೆಹೊರೆಯ ರಾಷ್ಟ್ರಗಳ ಮೇಲೆ ಗಮನ ಕೇಂದ್ರೀಕರಿಸಬೇಕು. ನೆರೆಹೊರೆಯ ರಾಷ್ಟ್ರಗಳೊಂದಿಗೆ ನಾವು ನಿಜವಾಗಿಯೂ ಸಂಬಂಧವನ್ನು ಗಣನೀಯ ಪ್ರಮಾಣದಲ್ಲಿ ಸುಧಾರಿಸಬಹುದೇ ಎಂಬ ಬಗ್ಗೆ ಯೋಚಿಸಬೇಕು. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕೆ ಭೇಟಿ ನೀಡಿದ್ದೇನೆ. ಆ ರಾಷ್ಟ್ರಗಳಿಗೆ ಹೋದಾಗ ನನ್ನ ಮನೆಗೇ ಹೋದ ಅನುಭವವಾಗಿದೆ ಎಂದು ಹೇಳಿದ್ದಾರೆ.
'ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕೆ ಭೇಟಿ ನೀಡಿದ ವೇಳೆ ನನಗೆ ವಿದೇಶದಲ್ಲಿದ್ದೇನೆ ಎಂದು ಅನಿಸುವುದಿಲ್ಲ. ಅಲ್ಲಿನ ಜನರು ನನ್ನಂತೆ ಕಾಣುವರು, ಅವರು ನನ್ನಂತೆ ಮಾತನಾಡುವರು, ಅವರು ನನ್ನಂತೆಯೇ ಹಾಡುಗಳನ್ನು ಇಷ್ಟಪಡುವರು, ನಾನು ಸೇವಿಸುವ ಆಹಾರಗಳನ್ನೇ ಅವರೂ ಸೇವಿಸುವರು. ನಾವು ಅವರೊಂದಿಗೆ ಶಾಂತಿ ಮತ್ತು ಸಾಮರಸ್ಯದಿಂದ ಬದುಕಲು ಕಲಿಯಬೇಕು ಎಂದು ಪಿತ್ರೋಡಾ ಹೇಳಿದ್ದಾರೆ. ನೆರೆಹೊರೆಯ ದೇಶಗಳಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದನೆಯಂಥ ಸಮಸ್ಯೆಗಳ ನಡುವೆಯೂ ಭಾರತವು ಆ ರಾಷ್ಟ್ರಗಳ ಜತೆ ಸಂಬಂಧ ಸುಧಾರಣೆಗೆ ಮುಂದಾಗಬೇಕು ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಆಹಾರ ಒದಗಿಸಿದ್ದಾರೆ.
ಕಾಂಗ್ರೆಸಿನ ಪಾಕ್ ಪ್ರೀತಿಗೆ ನಿದರ್ಶನ
ಸ್ಯಾಮ್ ಪಿತ್ರೋಡಾ ಹೇಳಿಕೆಯು ಕಾಂಗ್ರೆಸ್ ಪಾಕಿಸ್ತಾನ ಬಗ್ಗೆ ಅತಿಯಾದ ಪ್ರೀತಿ ಹೊಂದಿರುವುದನ್ನು ತೋರಿಸುತ್ತದೆ. ಇವರ ಹೇಳಿಕೆ ನೋಡಿದರೆ, 2008ರ ಮುಂಬೈ ದಾಳಿ ನಂತರವೂ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ನೆರೆಯ ದೇಶದ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವ ಬಗ್ಗೆ ಕಾರಣ ತಿಳಿಯುತ್ತದೆ, ಇದರಲ್ಲಿ ಅಚ್ಚರಿ ಎನಿಸುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಕುಟುಕಿದ್ದಾರೆ. "ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರೀಯ ಹಿತಾಸಕ್ತಿಯನ್ನು ಬದಿಗೊತ್ತಿ ಪಾಕಿಸ್ತಾನಕ್ಕೆ ಅನುಕೂಲ ಮಾಡಿಕೊಟ್ಟಿದೆ. ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಮೂಲಕ ಲಷ್ಕರ್ ಉಗ್ರ ಹಫೀಜ್ ಸಯೀದ್ ಜತೆಗೂ ಸಂಪರ್ಕ ಸಾಧಿಸಲಾಗಿತ್ತು. 26/11 ದಾಳಿ, ಪುಲ್ವಾಮಾ, ಪಹಲ್ಗಾಮ್ ದಾಳಿಯಲ್ಲಿ ಕಾಂಗ್ರೆಸ್ ನಾಯಕರು ಪಾಕಿಸ್ತಾನ ಪರ ಮಾತನಾಡಿದ್ದಾರೆ. ಅವರು ಪಾಕಿಸ್ತಾನವನ್ನು ಪ್ರೀತಿಸುತ್ತಿದ್ದು ಐಎನ್ಸಿ ಎಂದರೆ ಇಸ್ಲಾಮಾಬಾದ್ ನ್ಯಾಷನಲ್ ಕಾಂಗ್ರೆಸ್ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಟೀಕಿಸಿದ್ದಾರೆ.
Congress’ Overseas Unit Chairman Sam Pitroda has stirred controversy yet again with his latest remark, stating that visiting Pakistan feels like "going home." The comment has drawn sharp criticism from the BJP, which accused the Congress of harboring undue affection for Pakistan.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am