ಬ್ರೇಕಿಂಗ್ ನ್ಯೂಸ್
22-09-25 06:58 pm HK News Desk ದೇಶ - ವಿದೇಶ
ನವದೆಹಲಿ, ಸೆ.22: ಪಾಕಿಸ್ತಾನದ ಖೈಬರ್ ಪಕ್ತುಂಖ್ವಾ ಪ್ರಾಂತ್ಯದಲ್ಲಿ ಭಾನುವಾರ ಮಧ್ಯರಾತ್ರಿ ಭಾರೀ ಸ್ಫೋಟ ಸಂಭವಿಸಿದ್ದು, ಉಗ್ರರು, ಸ್ಥಳೀಯ ನಾಗರಿಕರು ಸೇರಿ 24ಕ್ಕೂ ಹೆಚ್ಚು ಸಾವಿಗೀಡಾಗಿದ್ದಾರೆ. ತೆಹ್ರೀಕ್ ಇ- ತಾಲಿಬಾನ್ ಉಗ್ರರು ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಬಾಂಬ್ ತಯಾರಿಸುವ ಕಚ್ಛಾ ಸಾಮಗ್ರಿಗಳನ್ನು ಜನವಸತಿ ಪ್ರದೇಶದಲ್ಲಿ ಸಂಗ್ರಹಿಸಿಡಲಾಗಿತ್ತು. ಅವುಗಳಿಗೆ ಬೆಂಕಿ ಹತ್ತಿಕೊಂಡು ಭಾರೀ ಸ್ಫೋಟ ಸಂಭವಿಸಿದ್ದು ಮಕ್ಕಳು, ಮಹಿಳೆಯರು ಸೇರಿ ಹತ್ತು ಜನ ಸ್ಥಳೀಯ ನಾಗರಿಕರು ಹಾಗೂ 14 ಜನ ಉಗ್ರರು ಸಾವನ್ನಪ್ಪಿದ್ದಾರೆ. ತೆಹ್ರೀಕ್ ಇ- ತಾಲಿಬಾನ್ ಉಗ್ರ ಸಂಘಟನೆಯ ಕಮಾಂಡರ್ ಗಳಾದ ಅಮಾನ್ ಗುಲ್ ಮತ್ತು ಮಸೂದ್ ಖಾನ್ ಕೂಡ ಮೃತರಲ್ಲಿ ಸೇರಿದ್ದಾರೆ ಎಂದು ಸ್ಥಳೀಯ ಪೊಲೀಸರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

![]()



ನಾಗರಿಕರನ್ನು ಮಾನವ ಗುರಾಣಿಯಾಗಿ ಬಳಸಿಕೊಳ್ಳುವುದು, ಮಸೀದಿಗಳಲ್ಲಿ ಬಾಂಬ್ ತಯಾರಿಸುವ ಕಚ್ಚಾ ವಸ್ತುಗಳನ್ನು ಶೇಖರಿಸಿಡುವ ಆರೋಪ ಅಮಾನ್ ಗುಲ್ ಮತ್ತು ಮಸೂದ್ ಖಾನ್ ಮೇಲಿತ್ತು. ಇದೇ ವೇಳೆ, ಈ ಕೃತ್ಯವನ್ನು ಪಾಕಿಸ್ತಾನದ ಸೇನಾ ಪಡೆಯೇ ನಡೆಸಿದೆ ಎನ್ನುವ ಮಾಹಿತಿಯನ್ನೂ ಸ್ಥಳೀಯರು ಹೇಳುತ್ತಿದ್ದಾರೆ. ಇತ್ತೀಚೆಗೆ ಪಾಕಿಸ್ತಾನದ ಸೇನಾಪಡೆಯನ್ನು ಗುರಿಯಾಗಿಸಿ ತೆಹ್ರೀಕ್ ಇ- ತಾಲಿಬಾನ್ ಸಂಘಟನೆ ಬಾಂಬ್ ದಾಳಿ ನಡೆಸಿತ್ತು. ಅದರಲ್ಲಿ 12 ಮಂದಿ ಸೈನಿಕರು ಮಡಿದಿದ್ದು ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದೆ ಎನ್ನಲಾಗುತ್ತಿದೆ. ದಕ್ಷಿಣ ವಜೀರಿಸ್ತಾನದಲ್ಲಿ ನಡೆದಿದ್ದ ಬಾಂಬ್ ದಾಳಿಯ ಹೊಣೆಯನ್ನು ಸೋಶಿಯಲ್ ಮೀಡಿಯಾದಲ್ಲಿ ತೆಹ್ರಿಕ್ ಸಂಘಟನೆ ಹೊತ್ತುಕೊಂಡಿತ್ತು.
ಖೈಬರ್ ಪಕ್ತುಂಖ್ವಾ ಪ್ರಾಂತ್ಯವು ಪಾಕಿಸ್ತಾನ- ಅಫ್ಘಾನಿಸ್ತಾನದ ಗಡಿಯಲ್ಲಿದ್ದು, ಅಫ್ಘಾನಲ್ಲಿ ತಾಲಿಬಾನ್ ಸರ್ಕಾರ ಚಾಲ್ತಿಗೆ ಬಂದ ಬಳಿಕ ಈ ಭಾಗದಲ್ಲಿ ಉಗ್ರವಾದಿ ಕೃತ್ಯಗಳು ಹೆಚ್ಚತೊಡಗಿದೆ. ಇದರ ಹಿಂದೆ ಅಫ್ಘಾನ್ ಕೈವಾಡ ಇದೆಯೆಂದು ಪಾಕ್ ಹೇಳಿದರೆ, ತಾಲಿಬಾನ್ ಸರಕಾರ ನಿರಾಕರಿಸುತ್ತ ಬಂದಿದೆ. ಇದೇ ವೇಳೆ, ಪಾಕಿಸ್ತಾನ ಜೈಲಿನಲ್ಲಿರುವ ಬಹಿಷ್ಕೃತ ನಾಯಕ ಇಮ್ರಾನ್ ಖಾನ್, ಪಾಕ್ ಸರಕಾರವನ್ನು ಟೀಕಿಸಿದ್ದು ಅಮಾಯಕ ಜನರ ಮೇಲೆ ಫೈಟರ್ ಜೆಟ್ ದಾಳಿ ನಡೆಸಿದ್ದರಿಂದ ಈ ದುರಂತ ಆಗಿದೆಯೆಂದು ಹೇಳಿದ್ದಾರೆ.
At least 24 people, including women, children, and militants, were killed in a massive explosion late Sunday night in Pakistan’s Khyber Pakhtunkhwa province. The blast reportedly occurred when crude bomb-making materials hidden inside a mosque by Tehreek-e-Taliban Pakistan (TTP) militants detonated.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm