ಬ್ರೇಕಿಂಗ್ ನ್ಯೂಸ್
24-09-25 01:07 pm HK News Desk ದೇಶ - ವಿದೇಶ
ಹ್ಯೂಸ್ಟನ್, ಸೆ.24 : ಅಮೆರಿಕದ ಟೆಕ್ಸಾಸ್ ರಾಜ್ಯದ ಶುಗರ್ ಲ್ಯಾಂಡ್ ಪಟ್ಟಣದಲ್ಲಿ ನಿರ್ಮಿಸಲಾಗಿರುವ 90 ಅಡಿ ಎತ್ತರದ ಕಂಚಿನ ಹನುಮಂತನ ಪ್ರತಿಮೆ ಕುರಿತು ಅಮೆರಿಕದಲ್ಲಿ ವಿವಾದ ಭುಗಿಲೆದ್ದಿದೆ. ಅಮೆರಿಕ ಕ್ರಿಶ್ಚಿಯನ್ ರಾಷ್ಟ್ರವಾಗಿದ್ದು ಟೆಕ್ಸಾಸ್ ರಾಜ್ಯದಲ್ಲಿ ಹಿಂದೂ ದೇವರಾದ ಹನುಮಂತನ ನಕಲಿ ಪ್ರತಿಮ ನಿರ್ಮಿಸಲಾಗಿದೆ. ನಾವಿದಕ್ಕೆ ಏಕೆ ಅನುಮತಿಸಬೇಕು? ಎಂದು ಸ್ಥಳೀಯ ರಿಪಬ್ಲಿಕನ್ ನಾಯಕ ಅಲೆಕ್ಸಾಂಡರ್ ಡಂಕನ್ ವಿಡಿಯೊ ಸಮೇತ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ.
ಇನ್ನೊಂದು ಪೋಸ್ಟ್ನಲ್ಲಿ ಅವರು ಬೈಬಲ್ ಉಲ್ಲೇಖಿಸಿ, ''ನನ್ನ ನಂಬಿಕೆಯ ದೇವರು ಹೊರತುಪಡಿಸಿ ನಿಮಗೆ ಬೇರೆ ದೇವರು ಇರಬಾರದು. ನೀವು ನಿಮಗಾಗಿ ಯಾವುದೇ ರೀತಿಯ ವಿಗ್ರಹವನ್ನು ಸ್ವರ್ಗದಲ್ಲಿ, ಭೂಮಿಯಲ್ಲಿ ಅಥವಾ ಸಮುದ್ರದಲ್ಲಿ ಮಾಡಿಟ್ಟುಕೊಳ್ಳಬಾರದು," ಎಂದು ಬರೆದು ಉದ್ಧಟತನ ತೋರಿದ್ದಾರೆ.
ಡಂಕನ್ ಅವರ ಈ ಮಾತಿಗೆ ಅಮೆರಿಕದಲ್ಲಿರುವ ಹಿಂದೂ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಹಿಂದೂ ಅಮೆರಿಕನ್ ಫೌಂಡೇಷನ್, ಇದೊಂದು ಹಿಂದೂ ವಿರೋಧಿ ಮತ್ತು ಪ್ರಚೋದನಕಾರಿ ಹೇಳಿಕೆಯಾಗಿದೆ. ಟೆಕ್ಸಾಸ್ ಆಡಳಿತ, ನಿಮ್ಮ ಸ್ವಂತ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಮತ್ತು ಹಿಂದೂ ವಿರೋಧಿ ದ್ವೇಷ ಹರಡುತ್ತಿರುವ ನಿಮ್ಮ ಪಕ್ಷದ ಸೆನೆಟ್ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೊನಾಲ್ಡ್ ಟ್ರಂಪ್ ಅವರನ್ನು 'ಎಕ್ಸ್'ನಲ್ಲಿ ಆಗ್ರಹಿಸಿದೆ. ಈ ಹೇಳಿಕೆಯು ಧಾರ್ಮಿಕ ತಾರತಮ್ಯವನ್ನು ಉತ್ತೇಜಿಸುತ್ತದೆ ಮತ್ತು ಅಮೆರಿಕ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದೂ ಎಚ್ ಎಎಫ್ ಹೇಳಿದೆ.
'ಎಕ್ಸ್' ಬಳಕೆದಾರರೊಬ್ಬರು, "ನೀವು ಹಿಂದೂ ಅಲ್ಲದ ಕಾರಣಕ್ಕೆ ಹನುಮನನ್ನು ಸುಳ್ಳು ದೇವ ಎಂದು ಹೇಳಲು ಸಾಧ್ಯವಿಲ್ಲ. ಯೇಸು ಭೂಮಿಗೆ ಬರುವ 2 ಸಾವಿರ ವರ್ಷಗಳ ಮೊದಲೇ ವೇದಗಳನ್ನು ರಚಿಸಲಾಗಿದೆ ಎಂದು ಕುಟುಕಿದ್ದಾರೆ. ಟೆಕ್ಸಾಸ್ನ ಅಷ್ಟಲಕ್ಷ್ಮಿ ದೇವಸ್ಥಾನದಲ್ಲಿ ಭಗವಾನ್ ಹನುಮಂತನ 90 ಅಡಿ ಕಂಚಿನ ಪ್ರತಿಮೆ ಇದೆ. ಈ ಪ್ರತಿಮೆಯನ್ನು 2024ರಲ್ಲಿ ಅನಾವರಣಗೊಳಿಸಲಾಗಿದ್ದು, 'ಸ್ಟಾಚ್ಯೂ ಆಫ್ ಯೂನಿಯನ್' ಎಂದು ಕರೆಯಲಾಗುತ್ತಿದೆ. ಆಗಲೂ ಇದರ ವಿರುದ್ಧ ಟ್ರಂಪ್ ಬೆಂಬಲಿಗರಿಂದ ಅಭಿಯಾನ ನಡೆದಿತ್ತು.
A 90-foot-tall bronze statue of Hindu deity Hanuman in Sugar Land, Texas, has triggered controversy after a local Republican leader questioned why such a monument was allowed in what he described as a “Christian nation.”
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am