ಬ್ರೇಕಿಂಗ್ ನ್ಯೂಸ್
27-09-25 11:16 pm HK News Desk ದೇಶ - ವಿದೇಶ
ಚೆನ್ನೈ, ಸೆ.27 : ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರು ಹಮ್ಮಿಕೊಂಡಿದ್ದ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದು 36 ಮಂದಿ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಸೇರಿದ್ದ ರ್ಯಾಲಿ ಸಂದರ್ಭದಲ್ಲಿ ಏಕಾಏಕಿ ಕಾಲ್ತುಳಿತ ಉಂಟಾಗಿದ್ದು ಘೋರ ದುರಂತ ನಡೆದಿದೆ.
ಎಂಟು ಮಕ್ಕಳು, 16 ಮಹಿಳೆಯರು ಸೇರಿದಂತೆ ಸುಮಾರು 36ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.





ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರು ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದ್ದು ಈ ವೇಳೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತದ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಹಲವು ಮಕ್ಕಳು ಕಾಣೆಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಆದರೆ ಅಷ್ಟರಲ್ಲಿ ಕೈತಪ್ಪಿ ಹೋಗಿತ್ತು. ಯುವ ನಾಯಕನಾಗಿ ಹೊಸ ರಾಜಕೀಯ ಪಕ್ಷದಿಂದ ಗಮನ ಸೆಳೆಯುತ್ತಿರುವಾಗಲೇ ಆಘಾತಕಾರಿ ಘಟನೆ ನಡೆದಿದೆ.
ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಸಂಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
At least 36 people, including at least eight children and 16 women, died in a stampede at a rally addressed by Tamilaga Vettri Kazhagam (TVK) president and actor Vijay in Karur on Saturday (September 27, 2025), as part of his State-wide political tour.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am