ಬ್ರೇಕಿಂಗ್ ನ್ಯೂಸ್
29-09-25 10:52 pm HK News Desk ದೇಶ - ವಿದೇಶ
ಲಕ್ನೋ, ಸೆ.29 : ಪರಿಶಿಷ್ಟ ಜಾತಿಯ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು 'ಪವಾಡ ಚಿಕಿತ್ಸೆ' ಮೂಲಕ ಆಮಿಷ ಒಡ್ಡುತ್ತಿದ್ದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಬಕ್ತೌರಿ ಖೇಡಾ ನಿವಾಸಿ ಮಲ್ಖಾನ್ (43) ಬಂಧಿತ ಆರೋಪಿ. ಎಫ್ಐಆರ್ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸ್ ತಂಡ ಪತ್ತೆಹಚ್ಚಿ ಬಂಧಿಸಿದೆ. ಆರೋಪಿ ಮಲ್ಖಾನ್ ತನ್ನ ಕೃಷಿ ಭೂಮಿಯಲ್ಲಿ ಹಾಲ್ ತರಹದ ಕಟ್ಟಡ ನಿರ್ಮಿಸಿಕೊಂಡಿದ್ದು ಅದನ್ನು ತಾತ್ಕಾಲಿಕ ಚರ್ಚ್ ಆಗಿ ಬಳಸುತ್ತಿದ್ದ ಎಂದು ಆರೋಪಿಸಲಾಗಿದೆ.
ಪ್ರತಿ ಭಾನುವಾರ ಮತ್ತು ಗುರುವಾರ, ಅವನು ಪರಿಶಿಷ್ಟ ಜಾತಿಯ ಮಹಿಳೆಯರು ಮತ್ತು ಮಕ್ಕಳನ್ನು ಒಟ್ಟುಗೂಡಿಸಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಾಗಿ ಹೇಳಿ ಪ್ರಾರ್ಥನೆಗೆ ಬರುವಂತೆ ಹೇಳುತ್ತಿದ್ದನು. ಈ ಕೂಟಗಳಲ್ಲಿ, ಭಾಗವಹಿಸುವವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸುತ್ತಿದ್ದರು. ಪೊಲೀಸರು ಹೇಳುವಂತೆ, ಮಲ್ಖಾನ್ ಕೂಡ ಕ್ರಿಶ್ಚಿಯನ್ ಧರ್ಮವನ್ನು ಅಳವಡಿಸಿಕೊಂಡಿದ್ದು, ತನ್ನ ಮಕ್ಕಳು ಮತ್ತು ಸಂಬಂಧಿಕರ ಹೆಸರನ್ನು ಕ್ರಿಶ್ಚಿಯನ್ ಹೆಸರುಗಳಿಗೆ ಬದಲಾಯಿಸಿದ್ದಾನೆ. ಪರಿಶಿಷ್ಟ ಜಾತಿಯ ಸದಸ್ಯರನ್ನು ಸಂಪರ್ಕಿಸಲು 'ಯೇಸು ಚಂಗೈ ಸಭಾ' ಎಂಬ ವಾಟ್ಸಾಪ್ ಗ್ರೂಪ್ ನಡೆಸುತ್ತಿದ್ದ.
ಬಂಧನದ ವೇಳೆ ಬೈಬಲ್ ಬೋಧನೆಗಳ ಕುರಿತಾದ ಎರಡು ಪುಸ್ತಕಗಳು ಮತ್ತು ಇತರ ಪ್ರಚಾರ ಸಾಮಗ್ರಿಗಳನ್ನು ವಶಪಡಿಸಲಾಗಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತಾಂತರ ಜಾಲದ ಮಾಸ್ಟರ್ ಮೈಂಡ್ ಎನ್ನಲಾದ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಇಲಾಖೆಯಿಂದ 25,000 ರೂ. ನಗದು ಬಹುಮಾನ ನೀಡಲಾಗಿದೆ.
Uttar Pradesh police have arrested a man accused of luring Dalit communities into Christianity by promising “miracle cures.” The accused, identified as 43-year-old Malkhan of Baktauri Kheda, allegedly converted his farmland shed into a makeshift church where he gathered women and children for prayer sessions twice a week. During these meetings, he reportedly attempted to persuade attendees to convert. Police recovered religious texts and promotional material during the arrest.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am