ಬ್ರೇಕಿಂಗ್ ನ್ಯೂಸ್
30-09-25 04:03 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಸೆ 30 : ಪಾಕಿಸ್ತಾನದ ಕ್ವೆಟ್ಟಾದಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲೇ 10 ಮಂದಿ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸಹಿತ ವಾಹನ ತರಲಾಗಿದ್ದು ಕಟ್ಟಡದ ಬಳಿ ಒಳರಸ್ತೆಗೆ ನುಗ್ಗುತ್ತಲೇ ಸ್ಫೋಟಿಸಲಾಗಿದೆ. ಬ್ಲಾಸ್ಟ್ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್ಸಿ (ಫ್ರಂಟಿಯರ್ ಕಾರ್ಪ್ಸ್ - ಸೇನಾ ತುಕಡಿ) ಪ್ರಧಾನ ಕಚೇರಿಯ ಬಳಿಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಸ್ಪೋಟದ ಬಳಿಕ ಅದೇ ಪ್ರದೇಶದಲ್ಲಿ ಗುಂಡಿನ ದಾಳಿ ಸದ್ದು ಕೇಳಿಬಂದಿದೆ. ಸ್ಥಳಕ್ಕೆ ರಕ್ಷಣಾ ತಂಡ ಮತ್ತು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಫೋಟಕ ತುಂಬಿದ ವಾಹನವು ಮಾಡೆಲ್ ಟೌನ್ನಿಂದ ಎಫ್ಸಿ ಪ್ರಧಾನ ಕಚೇರಿಯ ಬಳಿಯ ರಸ್ತೆಯ ಕಡೆಗೆ ತಿರುಗಿದಾಗಲೇ ಸ್ಫೋಟ ಸಂಭವಿಸಿದೆ. ಕ್ವೆಟ್ಟಾ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸ್ಫೋಟದ ಶಬ್ದವು ಎಷ್ಟು ಪ್ರಬಲವಾಗಿತ್ತೆಂದರೆ, ಅದು ಮೈಲುಗಳಷ್ಟು ದೂರದಲ್ಲಿ ಕೇಳಿಬಂತು, ಇದು ಪ್ರದೇಶವನ್ನು ಮಾತ್ರವಲ್ಲದೆ ಇಡೀ ನಗರವನ್ನು ಭಯಭೀತಗೊಳಿಸಿತು ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯಕ್ಕೆ ಸ್ಫೋಟದ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ. ಬಲೂಚಿಸ್ತಾನ್ ಬಂಡುಕೋರ ಗುಂಪು ಈ ದಾಳಿ ನಡೆಸಿರುವ ಸಾಧ್ಯತೆ ಇದೆ. ಬಲೂಚಿಸ್ತಾನ್ ಸ್ವತಂತ್ರ ಆಗಬೇಕೆಂದು ಈ ಭಾಗದಲ್ಲಿ ಬಲೂಚಿ ಲಿಬರೇಶನ್ ಆರ್ಮಿ ಪರ ಹೋರಾಟಗಾರರು ದಾಳಿ ನಡೆಸುತ್ತಿದ್ದಾರೆ.
A powerful suicide bombing rocked Quetta’s Zarghoon Road near the Frontier Corps headquarters on Tuesday afternoon, killing at least 10 people and injuring more than 32. CCTV footage of the blast has gone viral on social media. Police said an explosives-laden vehicle detonated as it turned toward the FC office, followed by gunfire in the area.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 06:48 pm
Mangalore Correspondent
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
ಯುವಜನರಲ್ಲಿ ಹೃದಯದ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್...
27-09-25 07:35 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm