ಬ್ರೇಕಿಂಗ್ ನ್ಯೂಸ್
01-10-25 09:44 pm HK News Desk ದೇಶ - ವಿದೇಶ
ನವದೆಹಲಿ, ಅ.1 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮಾತೆಯ ಚಿತ್ರವಿರುವ ರೂ. 100 ಮುಖಬೆಲೆಯ ನಾಣ್ಯವನ್ನು ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, 'ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.



ರೂ. 100 ಬೆಲೆಯ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ 'ವರದ ಮುದ್ರೆ'ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.
ನಾಣ್ಯದ ಮೇಲೆ ಆರ್ಎಸ್ಎಸ್ ಧ್ಯೇಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, 'ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..' ಎಂಬುದು ಇದರ ಅರ್ಥವಾಗಿದೆ.
1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಸಂಘದ ಐತಿಹಾಸಿಕ ಕೊಡುಗೆಗಳನ್ನು ಒತ್ತಿ ಹೇಳುತ್ತದೆ. ಜತೆಗೆ, ಭಾರತ ಮಾತೆಗೆ, ಆರ್ಎಸ್ಎಸ್ನ ಶತಮಾನಗಳಷ್ಟು ಹಳೆಯ ಸೇವೆ ಮತ್ತು ಸಮರ್ಪಣಾ ಪ್ರಯಾಣಕ್ಕೆ ಹೆಮ್ಮೆಯ ಗೌರವ ಎಂದು ಮೋದಿ ಹೇಳಿದ್ದಾರೆ.
ಸಮಾರಂಭದಲ್ಲಿ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದರು.
Prime Minister Narendra Modi released a ₹100 commemorative coin and a special postal stamp marking the centenary of the Rashtriya Swayamsevak Sangh (RSS) at Dr. Ambedkar International Centre in New Delhi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm