ಬ್ರೇಕಿಂಗ್ ನ್ಯೂಸ್
01-10-25 09:44 pm HK News Desk ದೇಶ - ವಿದೇಶ
ನವದೆಹಲಿ, ಅ.1 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮಾತೆಯ ಚಿತ್ರವಿರುವ ರೂ. 100 ಮುಖಬೆಲೆಯ ನಾಣ್ಯವನ್ನು ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, 'ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.



ರೂ. 100 ಬೆಲೆಯ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ 'ವರದ ಮುದ್ರೆ'ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.
ನಾಣ್ಯದ ಮೇಲೆ ಆರ್ಎಸ್ಎಸ್ ಧ್ಯೇಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, 'ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..' ಎಂಬುದು ಇದರ ಅರ್ಥವಾಗಿದೆ.
1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಸಂಘದ ಐತಿಹಾಸಿಕ ಕೊಡುಗೆಗಳನ್ನು ಒತ್ತಿ ಹೇಳುತ್ತದೆ. ಜತೆಗೆ, ಭಾರತ ಮಾತೆಗೆ, ಆರ್ಎಸ್ಎಸ್ನ ಶತಮಾನಗಳಷ್ಟು ಹಳೆಯ ಸೇವೆ ಮತ್ತು ಸಮರ್ಪಣಾ ಪ್ರಯಾಣಕ್ಕೆ ಹೆಮ್ಮೆಯ ಗೌರವ ಎಂದು ಮೋದಿ ಹೇಳಿದ್ದಾರೆ.
ಸಮಾರಂಭದಲ್ಲಿ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದರು.
Prime Minister Narendra Modi released a ₹100 commemorative coin and a special postal stamp marking the centenary of the Rashtriya Swayamsevak Sangh (RSS) at Dr. Ambedkar International Centre in New Delhi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am