ಬ್ರೇಕಿಂಗ್ ನ್ಯೂಸ್
02-10-25 03:45 pm HK News Desk ದೇಶ - ವಿದೇಶ
ನವದೆಹಲಿ, ಅ.2: ಡಿಸೆಂಬರ್ 5–6 ರಂದು ನಡೆಯಲಿರುವ 23ನೇ ವಾರ್ಷಿಕ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಈ ಬಗ್ಗೆ ಸಿದ್ಧತೆಗಳಲ್ಲಿ ತೊಡಗಿರುವ ಬಗ್ಗೆ ಮೂಲಗಳು ಖಚಿತಪಡಿಸಿವೆ.
ಫೆಬ್ರವರಿ 2022 ರಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ಪುಟಿನ್ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಕೊನೆಯ ಬಾರಿಗೆ 2021 ರಲ್ಲಿ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದರು. ವಿಶೇಷವಾಗಿ ಭಾರತದ ಮೇಲೆ ಅಮೆರಿಕವು ದಂಡನಾತ್ಮಕ ಸುಂಕಗಳನ್ನು ವಿಧಿಸಿದ ನಂತರ, ಎರಡು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಗಟ್ಟಿಗೊಳ್ಳುತ್ತಿರುವ ಮಧ್ಯೆ ಈ ಶೃಂಗಸಭೆ ನಡೆಯುತ್ತಿರುವುದು ಮಹತ್ವ ಪಡೆದಿದೆ. ಭಾರತ - ರಷ್ಯಾ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಈ ಶೃಂಗಸಭೆ ಹೆಚ್ಚಿನ ಅವಕಾಶ ಒದಗಿಸಲಿದೆ.
2024–25ರಲ್ಲಿ ಉಭಯ ರಾಷ್ಟ್ರಗಳ ನಡುವಿನ ವಹಿವಾಟು ದಾಖಲೆಯ 68.7 ಬಿಲಿಯನ್ ಡಾಲರ್ ತಲುಪಿತ್ತು. ಈ ಪೈಕಿ ತೈಲ ವಹಿವಾಟಿನದ್ದೇ ಸಿಂಹಪಾಲಾದರೆ, ರಷ್ಯಾಕ್ಕೆ ಭಾರತದ ರಫ್ತು ಪಾಲು 4.88 ಶತಕೋಟಿ ಡಾಲರ್ ಅಷ್ಟೇ ಆಗಿದೆ. ಎರಡು ದೇಶಗಳ ವ್ಯಾಪಾರ ಅಸಮತೋಲನವನ್ನು ಕಡಿಮೆಗೊಳಿಸುವುದು ಮಾತುಕತೆ ಸಮಯದಲ್ಲಿ ಪ್ರಮುಖವಾಗಿರುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಕಳೆದ ವರ್ಷದ ಶೃಂಗಸಭೆಗಾಗಿ ರಷ್ಯಾಕ್ಕೆ ಭೇಟಿ ನೀಡಿದ್ದು ಪುಟಿನ್ ಅವರೊಂದಿಗೆ ನಿಯಮಿತ ಸಂಬಂಧ ಹೊಂದಿದ್ದಾರೆ. ಸೆಪ್ಟೆಂಬರ್ನಲ್ಲಿ ನಡೆದ ಶಾಂಘೈ ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ನಾಯಕರು ಭೇಟಿಯಾಗಿದ್ದರು. ಅಲ್ಲಿ ತಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಬದ್ಧತೆಯನ್ನು ಪುನರುಚ್ಚರಿಸಿದ್ದರು.
Russian President Vladimir Putin is expected to visit India on December 5–6 for the 23rd Annual India-Russia Bilateral Summit, marking his first trip since the Russia-Ukraine conflict began in February 2022. Although neither New Delhi nor Moscow has officially confirmed, diplomatic sources suggest preparations are underway.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am