ಬ್ರೇಕಿಂಗ್ ನ್ಯೂಸ್
02-10-25 03:45 pm HK News Desk ದೇಶ - ವಿದೇಶ
ನವದೆಹಲಿ, ಅ.2: ಡಿಸೆಂಬರ್ 5–6 ರಂದು ನಡೆಯಲಿರುವ 23ನೇ ವಾರ್ಷಿಕ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಈ ಬಗ್ಗೆ ಸಿದ್ಧತೆಗಳಲ್ಲಿ ತೊಡಗಿರುವ ಬಗ್ಗೆ ಮೂಲಗಳು ಖಚಿತಪಡಿಸಿವೆ.
ಫೆಬ್ರವರಿ 2022 ರಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ಪುಟಿನ್ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಕೊನೆಯ ಬಾರಿಗೆ 2021 ರಲ್ಲಿ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದರು. ವಿಶೇಷವಾಗಿ ಭಾರತದ ಮೇಲೆ ಅಮೆರಿಕವು ದಂಡನಾತ್ಮಕ ಸುಂಕಗಳನ್ನು ವಿಧಿಸಿದ ನಂತರ, ಎರಡು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಗಟ್ಟಿಗೊಳ್ಳುತ್ತಿರುವ ಮಧ್ಯೆ ಈ ಶೃಂಗಸಭೆ ನಡೆಯುತ್ತಿರುವುದು ಮಹತ್ವ ಪಡೆದಿದೆ. ಭಾರತ - ರಷ್ಯಾ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಈ ಶೃಂಗಸಭೆ ಹೆಚ್ಚಿನ ಅವಕಾಶ ಒದಗಿಸಲಿದೆ.
2024–25ರಲ್ಲಿ ಉಭಯ ರಾಷ್ಟ್ರಗಳ ನಡುವಿನ ವಹಿವಾಟು ದಾಖಲೆಯ 68.7 ಬಿಲಿಯನ್ ಡಾಲರ್ ತಲುಪಿತ್ತು. ಈ ಪೈಕಿ ತೈಲ ವಹಿವಾಟಿನದ್ದೇ ಸಿಂಹಪಾಲಾದರೆ, ರಷ್ಯಾಕ್ಕೆ ಭಾರತದ ರಫ್ತು ಪಾಲು 4.88 ಶತಕೋಟಿ ಡಾಲರ್ ಅಷ್ಟೇ ಆಗಿದೆ. ಎರಡು ದೇಶಗಳ ವ್ಯಾಪಾರ ಅಸಮತೋಲನವನ್ನು ಕಡಿಮೆಗೊಳಿಸುವುದು ಮಾತುಕತೆ ಸಮಯದಲ್ಲಿ ಪ್ರಮುಖವಾಗಿರುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಕಳೆದ ವರ್ಷದ ಶೃಂಗಸಭೆಗಾಗಿ ರಷ್ಯಾಕ್ಕೆ ಭೇಟಿ ನೀಡಿದ್ದು ಪುಟಿನ್ ಅವರೊಂದಿಗೆ ನಿಯಮಿತ ಸಂಬಂಧ ಹೊಂದಿದ್ದಾರೆ. ಸೆಪ್ಟೆಂಬರ್ನಲ್ಲಿ ನಡೆದ ಶಾಂಘೈ ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ನಾಯಕರು ಭೇಟಿಯಾಗಿದ್ದರು. ಅಲ್ಲಿ ತಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಬದ್ಧತೆಯನ್ನು ಪುನರುಚ್ಚರಿಸಿದ್ದರು.
Russian President Vladimir Putin is expected to visit India on December 5–6 for the 23rd Annual India-Russia Bilateral Summit, marking his first trip since the Russia-Ukraine conflict began in February 2022. Although neither New Delhi nor Moscow has officially confirmed, diplomatic sources suggest preparations are underway.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 10:46 pm
Mangalore Correspondent
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
20-11-25 11:51 am
Bangalore Correspondent
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm