ಬ್ರೇಕಿಂಗ್ ನ್ಯೂಸ್
07-10-25 11:16 pm HK News Desk ದೇಶ - ವಿದೇಶ
ಕಾಸರಗೋಡು, ಅ.7 : ಮಂಜೇಶ್ವರ ಠಾಣೆ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಕಳೆನಾಶಕಕ್ಕೆ ಬಳಸುವ ವಿಷ ಸೇವಿಸಿ ದಂಪತಿ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಂಬಾರು ನಿವಾಸಿಗಳಾದ ಅಜಿತ್ (35) ಮತ್ತು ಅವರ ಪತ್ನಿ ಶ್ವೇತಾ (27) ಮೃತರು. ಅಜಿತ್ ಪೈಂಟ್ ವೃತ್ತಿಯವರಾಗಿದ್ದು, ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ನಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಸೋಮವಾರ ಸಂಜೆ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಉಪ್ಪಳ ಆಸ್ಪತ್ರೆಗೆ ಒಯ್ದು ಬಳಿಕ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮೃತಪಟ್ಟಿದ್ದರೆ, ಶ್ವೇತಾ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಇವರಿಗೆ ಮೂರು ವರ್ಷದ ಮಗು ಹೊಂದಿದ್ದು ಸೋಮವಾರ ಬೆಳಗ್ಗೆ ಅಜಿತ್ ಮಗುವನ್ನು ಪತ್ನಿಯ ಸಹೋದರಿಯ ಮನೆಗೆ ತೆರಳಿ, “ನಾವು ಹೊರಗೆ ಹೋಗುತ್ತಿದ್ದೇವೆ, ಮಗುವನ್ನು ನೋಡಿಕೊಳ್ಳಿ” ಎಂದು ಹೇಳಿ ಮರಳಿದ್ದರು. ಬಳಿಕ ಪತ್ನಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವೇಳೆಗೆ ಮನೆ ವರಾಂಡಾದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಇಬ್ಬರನ್ನು ನೆರೆಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು. ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ, ದಂಪತಿ ಬೇರೊಬ್ಬ ಮಹಿಳೆಯ ಚಿನ್ನವನ್ನು ಪಡೆದು ಅಡವಿಟ್ಟಿದ್ದರಂತೆ. ಅದನ್ಜು ಮರಳಿಸದೇ ಇದ್ದುದರಿಂದ ಚಿನ್ನವನ್ನು ಮರಳಿಸುವಂತೆ ಒತ್ತಡ ಹೇರಿದ್ದರು. ಮನೆಗೆ ಬಂದು ಕೇಳಿದ್ದರಿಂದ ಮರ್ಯಾದೆಗಂಜಿ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
A heartbreaking incident was reported from Kadambar in Manjeshwar, Kasaragod district, where a couple ended their lives by consuming pesticide at their home. The deceased have been identified as Ajith (35), a painter by profession, and his wife Shwetha (27), a teacher at a private school in Varkadi Bakery Junction.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm