ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm