ಬ್ರೇಕಿಂಗ್ ನ್ಯೂಸ್
08-10-25 08:57 pm HK News Desk ದೇಶ - ವಿದೇಶ
ಮುಂಬೈ, ಅ.8: ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ನಗರದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು.
1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ಅತಿದೊಡ್ಡ ಏರ್ಪೋರ್ಟ್ ಆಗಲಿದ್ದು ದೇಶದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಹೊರೆಯನ್ನು ಕಡಿಮೆ ಮಾಡಲಿದೆ.
ಪ್ರಧಾನಿ ಮೋದಿ ಅವರು ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟನೆಗೆ ಮುನ್ನ, ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಹಾಕಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.









ಇದು ಭಾರತದ ಅತಿದೊಡ್ಡ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯಾಗಿದ್ದು, ಇದನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೂ ಇದಾಗಿದೆ. ಇದೇ ವೇಳೆ ಪ್ರಧಾನಿ ಮೋದಿ, ಅತ್ರೆ ಚೌಕ್ನಿಂದ ಕಫೆ ಪೆರೇಡ್ ವರೆಗೆ ವಿಸ್ತರಿಸಿರುವ ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಅನ್ನು ಉದ್ಘಾಟಿಸಿದರು. ಇದನ್ನು 12,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೊಬೈಲ್ ಟಿಕೆಟಿಂಗ್ ಸೇರಿದಂತೆ ಪ್ರಯಾಣಿಕರಿಗೆ ಪ್ರಯೋಜನ ನೀಡುವ ಮುಂಬೈ ಒನ್ ಅಪ್ಲಿಕೇಶನ್ ಅನ್ನು ಸಹ ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.
Prime Minister Narendra Modi on Wednesday inaugurated the first phase of the Navi Mumbai International Airport, built at a cost of ₹19,650 crore. Spread across 1,160 hectares, the airport is set to become India’s largest, significantly boosting the nation’s aviation capacity and easing congestion at Mumbai’s Chhatrapati Shivaji Maharaj International Airport.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm