ಬ್ರೇಕಿಂಗ್ ನ್ಯೂಸ್
08-10-25 08:57 pm HK News Desk ದೇಶ - ವಿದೇಶ
ಮುಂಬೈ, ಅ.8: ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ನಗರದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು.
1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು ಭಾರತದ ಅತಿದೊಡ್ಡ ಏರ್ಪೋರ್ಟ್ ಆಗಲಿದ್ದು ದೇಶದ ವಾಯುಯಾನ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಹೊರೆಯನ್ನು ಕಡಿಮೆ ಮಾಡಲಿದೆ.
ಪ್ರಧಾನಿ ಮೋದಿ ಅವರು ನವಿ ಮುಂಬೈ ವಿಮಾನ ನಿಲ್ದಾಣ ಉದ್ಘಾಟನೆಗೆ ಮುನ್ನ, ವಿಮಾನ ನಿಲ್ದಾಣದ ಒಳಗೆ ಒಂದು ಸುತ್ತು ಹಾಕಿ, ಅತ್ಯಾಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯಪಾಲ ಆಚಾರ್ಯ ದೇವವ್ರತ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಉಪಸ್ಥಿತರಿದ್ದರು.









ಇದು ಭಾರತದ ಅತಿದೊಡ್ಡ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯಾಗಿದ್ದು, ಇದನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೂ ಇದಾಗಿದೆ. ಇದೇ ವೇಳೆ ಪ್ರಧಾನಿ ಮೋದಿ, ಅತ್ರೆ ಚೌಕ್ನಿಂದ ಕಫೆ ಪೆರೇಡ್ ವರೆಗೆ ವಿಸ್ತರಿಸಿರುವ ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಅನ್ನು ಉದ್ಘಾಟಿಸಿದರು. ಇದನ್ನು 12,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೊಬೈಲ್ ಟಿಕೆಟಿಂಗ್ ಸೇರಿದಂತೆ ಪ್ರಯಾಣಿಕರಿಗೆ ಪ್ರಯೋಜನ ನೀಡುವ ಮುಂಬೈ ಒನ್ ಅಪ್ಲಿಕೇಶನ್ ಅನ್ನು ಸಹ ಪ್ರಧಾನಿ ಮೋದಿ ಬಿಡುಗಡೆ ಮಾಡಿದರು.
Prime Minister Narendra Modi on Wednesday inaugurated the first phase of the Navi Mumbai International Airport, built at a cost of ₹19,650 crore. Spread across 1,160 hectares, the airport is set to become India’s largest, significantly boosting the nation’s aviation capacity and easing congestion at Mumbai’s Chhatrapati Shivaji Maharaj International Airport.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am