ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am