ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am