ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm