ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am