ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm