ಬ್ರೇಕಿಂಗ್ ನ್ಯೂಸ್
13-10-25 05:31 pm HK News Desk ದೇಶ - ವಿದೇಶ
ತಿರುವನಂತಪುರಂ, ಅ.13 : ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ 26 ವರ್ಷದ ಯುವಕನೊಬ್ಬ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಇನ್ ಸ್ಟಾ ಗ್ರಾಮ್ ಪೋಸ್ಟ್ ನಲ್ಲಿ ತನ್ನ ಸಾವಿಗೆ ಆರೆಸ್ಸೆಸ್ ಸದಸ್ಯರ ಲೈಂಗಿಕ ದೌರ್ಜನ್ಯ ಕಾರಣ ಎಂದು ಆರೋಪ ಮಾಡಿ ಸಂಚಲನ ಮೂಡಿಸಿದ್ದಾನೆ.
ಕೊಟ್ಟಾಯಂ ಜಿಲ್ಲೆಯ ತಂಪಲಕಾಡ್ ನಿವಾಸಿ ಆನಂದ್ ಸಾವಿಗೆ ಶರಣಾದ ಯುವಕನಾಗಿದ್ದು, ಡೆತ್ ನೋಟ್ ನಲ್ಲಿ ಹೇಳಿರುವ ಪ್ರಕಾರ ಬಾಲ್ಯದಿಂದಲೇ ಆರೆಸ್ಸೆಸ್ ಕಾರ್ಯಕರ್ತನಾಗಿದ್ದೆ. ಸಣ್ಣದಿರುವಾಗಲೇ ತಾನು ನಂಬಿದ ವ್ಯಕ್ತಿಗಳೇ ಲೈಂಗಿಕ ದೌರ್ಜನ್ಯ ಎಸಗಿದರು. ಅದರಿಂದಾಗಿ ತೀವ್ರ ಮಾನಸಿಕ ಕಿರುಕುಳ ಅನುಭವಿಸಿದ್ದೇನೆ ಎಂದಿದ್ದಾನೆ. ತಿರುವನಂತಪುರದಲ್ಲಿ ಉದ್ಯೋಗ ಮಾಡುತ್ತಿದ್ದ ಆನಂದ್, ಅಲ್ಲಿಯೇ ಲಾಡ್ಜ್ ಒಂದರಲ್ಲಿ ಎರಡು ದಿನಗಳ ಹಿಂದೆ ಸಾವಿಗೆ ಶರಣಾಗಿದ್ದಾನೆ.


ನಾನು ಸಾವಿಗೆ ಶರಣಾಗುತ್ತಿರುವುದು ಲವ್ ಅಫೇರ್, ಹುಡುಗಿಯ ಕಾರಣಕ್ಕೆ ಅಥವಾ ಯಾವುದೇ ಸಾಲದ ಕಾರಣಕ್ಕೆ ಅಲ್ಲ. ತೀವ್ರ ಖಿನ್ನತೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ವೈದ್ಯರು ಕೊಟ್ಟಿರುವ ಔಷಧಿಗಳನ್ನು ಸೇವಿಸುತ್ತ ನನ್ನ ಕೆಲಸ ಮಾಡುವುದಕ್ಕೆ ಆಗುತ್ತಿಲ್ಲ. ಹಾಗಾಗಿ ಸಾವಿಗೆ ಶರಣಾಗುತ್ತಿದ್ದೇನೆ ಎಂದು 15 ಪುಟಗಳಷ್ಟು ಉದ್ದಕ್ಕೆ ದೀರ್ಘ ಪತ್ರ ಬರೆದು ಇನ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾನೆ.
ತಂದೆಯ ಸಲಹೆಯಂತೆ ಸಣ್ಣ ವಯಸ್ಸಿನಲ್ಲೇ ಆರೆಸ್ಸೆಸ್ ಸೇರ್ಪಡೆಯಾಗಿದ್ದೆ. ಆದರೆ ನಾನು ಸೋದರನೆಂದುಕೊಂಡಿದ್ದ ವ್ಯಕ್ತಿಯೊಬ್ಬರು ನನಗೆ ತೀವ್ರ ಕಿರುಕುಳ ನೀಡಿದ್ದಾರೆ. ಅದೇ ರೀತಿ ಹಲವಾರು ಆರೆಸ್ಸೆಸ್ ಕಾರ್ಯಕರ್ತರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದಿರುವ ಆನಂದ್, ಎನ್.ಎಂ. ಎಂದು ನಮೂದಿಸಿರುವ ವ್ಯಕ್ತಿ ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಸಕ್ರಿಯನಾಗಿದ್ದು ಅತಿ ಹೆಚ್ಚು ಬಾರಿ ಕಿರುಕುಳ ನೀಡಿದ್ದಾನೆಂದು ತಿಳಿಸಿದ್ದಾನೆ. ನನ್ನನ್ನು ಸೆಕ್ಸ್ ಟೂಲ್ ನಂತೆ ಮಾಡಿಕೊಂಡಿದ್ದ. ಮಾನಸಿಕ ನೋವಿನಿಂದಾಗಿ ವೈದ್ಯರಿಗೆ ತೋರಿಸಿದಾಗ ಅಬ್ಸೆಸ್ಸಿವ್ ಕಂಪಲ್ಸಿವ್ ಡಿಸಾರ್ಡರ್ ಎಂದು ತಿಳಿಸಿದರು. ಆತನಿಂದಾಗಿಯೇ ಈ ರೀತಿಯ ಕಾಯಿಲೆ ನನಗೆ ಆವರಿಸಿತ್ತು. ಕುಟುಂಬದಲ್ಲಿ ಸಂಬಂಧಿಕ ಮತ್ತು ಸೋದರನಾಗಿದ್ದ ಆ ವ್ಯಕ್ತಿ ನನಗೆ ತೀವ್ರ ಕಿರುಕುಳ ನೀಡಿದ್ದಾನೆ.
ಆರೆಸ್ಸೆಸ್ ಶಿಬಿರಗಳಲ್ಲಿಯೂ ಕೆಲವರು ನನಗೆ ಕಿರುಕುಳ ನೀಡಿದ್ದಾರೆ. ಅವರ ಹೆಸರು ಈಗ ನೆನಪಿಗೆ ಬರುತ್ತಿಲ್ಲ. ಕೆಲವರಿಂದ ದೈಹಿಕವಾಗಿಯೂ ಹಲ್ಲೆಗೀಡಾಗಿದ್ದೇನೆ ಎಂದು ಆನಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಘಟನೆ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಡಿವೈಎಫ್ಐ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದೆ.
In a suspected case of suicide, a 26-year-old software engineer, Anandu Aji, was found dead in a lodge room in Thampanoor, Thiruvananthapuram on Thursday. Anandu, a native of Thampalakad in Kottayam district, was reportedly suffering severe mental distress following repeated sexual abuse by members of the Rashtriya Swayamsevak Sangh (RSS).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm