ಬ್ರೇಕಿಂಗ್ ನ್ಯೂಸ್
14-10-25 11:11 am HK News Desk ದೇಶ - ವಿದೇಶ
ಚೆನ್ನೈ, ಅ.14 : ತಮಿಳುನಾಡಿನ ಕರೂರಿನಲ್ಲಿ ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪ್ರಚಾರ ರ್ಯಾಲಿ ನಡೆಸುತ್ತಿದ್ದಾಗ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಟಿಎಂಕೆ ಪಕ್ಷದ ಅಧ್ಯಕ್ಷ, ನಟ ವಿಜಯ್ ಪ್ರಚಾರ ರ್ಯಾಲಿ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ 41 ಜನರು ಬಲಿಯಾಗಿದ್ದರು. ಈ ಘಟನೆಯನ್ನು ಆಡಳಿತಾರೂಢ ಡಿಎಂಕೆ ಷಡ್ಯಂತ್ರ ಎಂದು ಆರೋಪಿಸಿದ್ದ ಟಿವಿಕೆ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆಗೆ ಮನವಿ ಮಾಡಿತ್ತು.
ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು, ಸಿಬಿಐ ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಸಮಿತಿಯನ್ನು ನೇಮಿಸಿದೆ. ಇದಕ್ಕೂ ಮುನ್ನ ಮದ್ರಾಸ್ ಹೈಕೋರ್ಟ್ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸುವಂತೆ ಆದೇಶಿಸಿತ್ತು. ಆದರೆ, ಎಸ್ಐಟಿಯಲ್ಲಿ ತಮಿಳುನಾಡಿನ ಪೊಲೀಸ್ ಅಧಿಕಾರಿಗಳು ಮಾತ್ರ ಇದ್ದು, ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಆರೋಪಿಸಿ ಟಿವಿಕೆ ಪಕ್ಷ ಸುಪ್ರೀಂ ಮೆಟ್ಟಿಲೇರಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ, ಸುಪ್ರೀಂ ಕೋರ್ಟಿನ ಹಾದಿ ತಪ್ಪಿಸಲಾಗಿದೆ, ಸತ್ಯವನ್ನು ಮರೆಮಾಚಿ ಕೋರ್ಟನ್ನು ತಪ್ಪು ದಾರಿಗೆ ಎಳೆದಿದ್ದಾರೆ. ರಾಜಕೀಯ ಕಾರಣಕ್ಕೆ ಸಂತ್ರಸ್ತರನ್ನು ದುರ್ಬಳಕೆ ಮಾಡಲಾಗಿದೆ. ಅರ್ಜಿದಾರರು ದುರಂತದಲ್ಲಿ ಮೃತಪಟ್ಟ ಕುಟುಂಬದ ಸಂಬಂಧಿಕರಲ್ಲ. ಯಾರದ್ದೋ ಸಹಿ ಮಾಡಿಸಿ ಕೋರ್ಟಿಗೆ ನೀಡಲಾಗಿದೆ ಎಂದು ಆರೋಪಿಸಿದೆ.
The Supreme Court has handed over the investigation of the Karur stampede case in Tamil Nadu to the CBI, following a petition by actor and TVK party chief Vijay, who alleged a DMK conspiracy behind the incident. The September 27 rally tragedy claimed 41 lives during Vijay’s political campaign. A committee led by retired Supreme Court judge Ajay Rastogi will supervise the probe.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm