ಬ್ರೇಕಿಂಗ್ ನ್ಯೂಸ್
14-10-25 10:33 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಭಾರತದಲ್ಲಿ ಹೂಡಿಕೆ ಮಾಡದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡದ ನಡುವೆಯೂ ಅಮೆರಿಕ ಮೂಲದ ಜಾಗತಿಕ ಟೆಕ್ ದೈತ್ಯ ಗೂಗಲ್ ಸಂಸ್ಥೆ ಭಾರತದಲ್ಲಿ 15 ಶತಕೋಟಿ ಡಾಲರ್ ಮೌಲ್ಯದ ಭಾರೀ ಮೊತ್ತದ ಹೂಡಿಕೆಗೆ ಮುಂದಾಗಿದೆ.
ಭಾರತದಲ್ಲಿ ಮೊದಲ AI-ಹಬ್ಗಾಗಿ ಬರೋಬ್ಬರಿ 15 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡಲಿದೆ. ಈ ಬಗ್ಗೆ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಖುದ್ದಾಗಿ ಭಾರತದ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. ಮಂಗಳವಾರ ಪ್ರಧಾನಿ ಮೋದಿಯವರನ್ನು ಭೇಟಿಯಾದ ಪಿಚೈ, ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಿರ್ಮಿಸಬೇಕೆಂದಿರುವ ಗೂಗಲ್ ಕಂಪನಿಯ ಮೊದಲ AI ಹಬ್ಗಾಗಿ ಯೋಜನೆಗಳನ್ನು ಹಂಚಿಕೊಂಡರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುಂದರ್ ಪಿಚೈ ಅವರು, "ವಿಶಾಖಪಟ್ಟಣದಲ್ಲಿ ಮೊದಲ Google AI ಹಬ್ಗಾಗಿ ನಮ್ಮ ಯೋಜನೆಗಳನ್ನು ಹಂಚಿಕೊಳ್ಳಲಿದ್ದೇವೆ. ಈ ಬಗ್ಗೆ ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನಡೆಸಿದ್ದು ಇದು ಭಾರತದ ಪಾಲಿಗೆ ಪ್ರಮುಖ ಹೆಗ್ಗುರುತು ಎಂದು ಬರೆದುಕೊಂಡಿದ್ದಾರೆ.
"ಈ ಹಬ್ ನಲ್ಲಿ ಗಿಗಾವ್ಯಾಟ್- ಪ್ರಮಾಣದ ಕಂಪ್ಯೂಟರ್ ಸಾಮರ್ಥ್ಯ, ಅಂತರಾಷ್ಟ್ರೀಯ ಸಬ್ಸೀ ಗೇಟ್ವೇ ಮತ್ತು ದೊಡ್ಡ ಪ್ರಮಾಣದ ಇಂಧನ ಮೂಲಸೌಕರ್ಯವನ್ನು ಸಂಯೋಜಿಸುತ್ತದೆ. ಇದಲ್ಲದೇ, ದೇಶಾದ್ಯಂತ ಬೆಳವಣಿಗೆಯಲ್ಲಿ ಕ್ರಾಂತಿಯಾಗಲಿದೆ ಎಂದು ಪೋಸ್ಟ್ ಮಾಡಿದ್ದಾರೆ. ಅಮೆರಿಕದಿಂದ ಹೊರಗೆ ಅತಿದೊಡ್ಡ AI ಹಬ್ ಆಗಿ ವಿಶಾಖಪಟ್ಟಣ ರೂಪುಗೊಳ್ಳಲಿದ್ದು ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ 15 ಶತಕೋಟಿ ಡಾಲರ್ ಹೂಡಿಕೆ ಮಾಡಲಾಗುವುದು. ಪ್ರಮುಖ ಡೇಟಾ ಸೆಂಟರ್ ಮತ್ತು ಕೃತಕ ಬುದ್ಧಿಮತ್ತೆ ನೆಲೆಯನ್ನು ಈ ಕೇಂದ್ರ ಒಳಗೊಂಡಿರುತ್ತದೆ ಎಂದು ಸುಂದರ್ ಪಿಚೈ ಹೇಳಿದ್ದಾರೆ.
2026ರ ಭಾರತ-AI ಇಂಪ್ಯಾಕ್ಟ್ ಶೃಂಗಸಭೆಗೆ ಮುಂಚಿತವಾಗಿ ದೆಹಲಿಯಲ್ಲಿ ನಡೆದ ಗೂಗಲ್ ಆಯೋಜಿಸಿದ ಭಾರತ್ AI ಶಕ್ತಿ ಕಾರ್ಯಕ್ರಮದಲ್ಲಿ ಈ ಯೋಜನೆಯನ್ನು ಔಪಚಾರಿಕವಾಗಿ ಅನಾವರಣಗೊಳಿಸಲಾಯಿತು. ಹೊಸ AI ಹಬ್ ಪ್ರಬಲ AI ಮೂಲಸೌಕರ್ಯ, ಡೇಟಾ ಸೆಂಟರ್ ಸಾಮರ್ಥ್ಯ, ಹೊಸ ದೊಡ್ಡ ಪ್ರಮಾಣದ ಇಂಧನ ಮೂಲಗಳು ಮತ್ತು ವಿಸ್ತೃತ ಫೈಬರ್-ಆಪ್ಟಿಕ್ ನೆಟ್ವರ್ಕ್ ಅನ್ನು ಒಂದೇ ಸ್ಥಳದಲ್ಲಿ ಸಂಯೋಜಿಸುತ್ತದೆ ಎಂದು ಹೇಳಲಾಗಿದೆ.
In a bold move amid pressure from U.S. President Donald Trump to curtail overseas tech investments, Google has committed USD 15 billion over five years to develop India’s first major AI hub in Visakhapatnam, Andhra Pradesh — its largest project outside the U.S.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm