ಬ್ರೇಕಿಂಗ್ ನ್ಯೂಸ್
15-10-25 11:02 pm HK News Desk ದೇಶ - ವಿದೇಶ
ನವದೆಹಲಿ, ಅ.15 : ಪಾಕಿಸ್ತಾನ- ಅಫ್ಘಾನಿಸ್ತಾನ ಮಧ್ಯೆ ಪೂರ್ಣ ಮಟ್ಟದ ಸಂಘರ್ಷ ಏರ್ಪಟ್ಟಿದೆ. ಒಂದೆಡೆ ಕದನ ವಿರಾಮ ಎನ್ನುತ್ತಲೇ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ಕಂದಹಾರ್ ಮೇಲೆ ಬಾಂಬ್ ದಾಳಿ ನಡೆಸಿದ್ದು, 15 ನಾಗರಿಕರು ಸಾವನ್ನಪ್ಪಿದ್ದು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ್ರತಿಯಾಗಿ ತಾಲಿಬಾನಿಗಳು ಪಾಕಿಸ್ತಾನ ಗಡಿಯಾಚೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು ಹಲವು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಪಾಕಿಸ್ತಾನ ವಾಯುಪಡೆಯು ಕಂದಹಾರ್ ಬಳಿಯ ಸ್ಪಿನ್ ಬೋಲ್ಡಾಕ್ ಪ್ರದೇಶಕ್ಕೆ ದಾಳಿ ನಡೆಸಿದೆ. ವಸತಿ ಪ್ರದೇಶದ ಮೇಲೆ ದಾಳಿ ಎಸಗಿದ್ದರಿಂದ ಮಕ್ಕಳು, ಮಹಿಳೆಯರು ಸೇರಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆಂದು ಅಫ್ಘಾನ್ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.
ಇದರ ಬೆನ್ನಲ್ಲೇ ಪಾಕ್ ಮತ್ತು ಅಫ್ಘಾನ್ ಸೇನಾಪಡೆಗಳು ಕದನ ವಿರಾಮ ಘೋಷಣೆ ಮಾಡಿದ್ದು, ಬುದವಾರ ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಈ ವಿರಾಮ ಇರಲಿದೆ. ಬುಧವಾರ ಕಾಬೂಲ್ ನಲ್ಲಿ ತೈಲ ಟ್ಯಾಂಕರ್ ಸ್ಫೋಟಿಸಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪಾಕಿಸ್ತಾನವು ಯುದ್ಧ ಕೊನೆಗೊಳಿಸುವುದಕ್ಕಾಗಿ ಕತಾರ್ ಮತ್ತು ಸೌದಿ ಅರೇಬಿಯಾವನ್ನು ಮಧ್ಯವರ್ತಿಯಾಗಿ ಬರುವಂತೆ ಕೇಳಿಕೊಂಡಿದೆ. ಮಾತುಕತೆ ಕಾರಣಕ್ಕೆ ಪಾಕ್ ಸಚಿವರು ಅಫ್ಘಾನ್ ಒಳಗೆ ಬರಬಾರದು ಎಂದು ತಾಲಿಬಾನ್ ಹೇಳಿಕೊಂಡಿದೆ.
ಕಳೆದೊಂದು ವಾರದಿಂದ ಉಭಯ ದೇಶಗಳ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಪಾಕ್ ವಾರದ ಹಿಂದೆ ಕಾಬೂಲಿನ ಟಿಟಿಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಮಿಲಿಟರಿಯು ಪಾಕ್ ಮೇಲೆ ಮುಗಿಬಿದ್ದಿದೆ. ಇದೇ ವೇಳೆ ಅಫ್ಘಾನ್ ವಿದೇಶಾಂಗ ಮಂತ್ರಿ ಮುತ್ತಾಕಿ ಭಾರತಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನ ವಿರುದ್ಧ ಕಾರ್ಯಾಚರಣೆಗೆ ಬಲ ಸಿಕ್ಕಂತಾಗಿದೆ.
Full-scale conflict has erupted between Pakistan and Afghanistan after the Pakistan Air Force carried out airstrikes on Kandahar’s Spin Boldak region, killing at least 15 civilians and injuring over 100. The attack targeted residential areas, leading to heavy civilian casualties, including women and children, according to Afghan government spokesperson Zabihullah Mujahid.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm