ಬ್ರೇಕಿಂಗ್ ನ್ಯೂಸ್
15-10-25 11:02 pm HK News Desk ದೇಶ - ವಿದೇಶ
ನವದೆಹಲಿ, ಅ.15 : ಪಾಕಿಸ್ತಾನ- ಅಫ್ಘಾನಿಸ್ತಾನ ಮಧ್ಯೆ ಪೂರ್ಣ ಮಟ್ಟದ ಸಂಘರ್ಷ ಏರ್ಪಟ್ಟಿದೆ. ಒಂದೆಡೆ ಕದನ ವಿರಾಮ ಎನ್ನುತ್ತಲೇ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ಕಂದಹಾರ್ ಮೇಲೆ ಬಾಂಬ್ ದಾಳಿ ನಡೆಸಿದ್ದು, 15 ನಾಗರಿಕರು ಸಾವನ್ನಪ್ಪಿದ್ದು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ್ರತಿಯಾಗಿ ತಾಲಿಬಾನಿಗಳು ಪಾಕಿಸ್ತಾನ ಗಡಿಯಾಚೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು ಹಲವು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಪಾಕಿಸ್ತಾನ ವಾಯುಪಡೆಯು ಕಂದಹಾರ್ ಬಳಿಯ ಸ್ಪಿನ್ ಬೋಲ್ಡಾಕ್ ಪ್ರದೇಶಕ್ಕೆ ದಾಳಿ ನಡೆಸಿದೆ. ವಸತಿ ಪ್ರದೇಶದ ಮೇಲೆ ದಾಳಿ ಎಸಗಿದ್ದರಿಂದ ಮಕ್ಕಳು, ಮಹಿಳೆಯರು ಸೇರಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆಂದು ಅಫ್ಘಾನ್ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.
ಇದರ ಬೆನ್ನಲ್ಲೇ ಪಾಕ್ ಮತ್ತು ಅಫ್ಘಾನ್ ಸೇನಾಪಡೆಗಳು ಕದನ ವಿರಾಮ ಘೋಷಣೆ ಮಾಡಿದ್ದು, ಬುದವಾರ ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಈ ವಿರಾಮ ಇರಲಿದೆ. ಬುಧವಾರ ಕಾಬೂಲ್ ನಲ್ಲಿ ತೈಲ ಟ್ಯಾಂಕರ್ ಸ್ಫೋಟಿಸಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪಾಕಿಸ್ತಾನವು ಯುದ್ಧ ಕೊನೆಗೊಳಿಸುವುದಕ್ಕಾಗಿ ಕತಾರ್ ಮತ್ತು ಸೌದಿ ಅರೇಬಿಯಾವನ್ನು ಮಧ್ಯವರ್ತಿಯಾಗಿ ಬರುವಂತೆ ಕೇಳಿಕೊಂಡಿದೆ. ಮಾತುಕತೆ ಕಾರಣಕ್ಕೆ ಪಾಕ್ ಸಚಿವರು ಅಫ್ಘಾನ್ ಒಳಗೆ ಬರಬಾರದು ಎಂದು ತಾಲಿಬಾನ್ ಹೇಳಿಕೊಂಡಿದೆ.
ಕಳೆದೊಂದು ವಾರದಿಂದ ಉಭಯ ದೇಶಗಳ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಪಾಕ್ ವಾರದ ಹಿಂದೆ ಕಾಬೂಲಿನ ಟಿಟಿಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಮಿಲಿಟರಿಯು ಪಾಕ್ ಮೇಲೆ ಮುಗಿಬಿದ್ದಿದೆ. ಇದೇ ವೇಳೆ ಅಫ್ಘಾನ್ ವಿದೇಶಾಂಗ ಮಂತ್ರಿ ಮುತ್ತಾಕಿ ಭಾರತಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನ ವಿರುದ್ಧ ಕಾರ್ಯಾಚರಣೆಗೆ ಬಲ ಸಿಕ್ಕಂತಾಗಿದೆ.
Full-scale conflict has erupted between Pakistan and Afghanistan after the Pakistan Air Force carried out airstrikes on Kandahar’s Spin Boldak region, killing at least 15 civilians and injuring over 100. The attack targeted residential areas, leading to heavy civilian casualties, including women and children, according to Afghan government spokesperson Zabihullah Mujahid.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm