ಬ್ರೇಕಿಂಗ್ ನ್ಯೂಸ್
15-10-25 11:02 pm HK News Desk ದೇಶ - ವಿದೇಶ
ನವದೆಹಲಿ, ಅ.15 : ಪಾಕಿಸ್ತಾನ- ಅಫ್ಘಾನಿಸ್ತಾನ ಮಧ್ಯೆ ಪೂರ್ಣ ಮಟ್ಟದ ಸಂಘರ್ಷ ಏರ್ಪಟ್ಟಿದೆ. ಒಂದೆಡೆ ಕದನ ವಿರಾಮ ಎನ್ನುತ್ತಲೇ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ಕಂದಹಾರ್ ಮೇಲೆ ಬಾಂಬ್ ದಾಳಿ ನಡೆಸಿದ್ದು, 15 ನಾಗರಿಕರು ಸಾವನ್ನಪ್ಪಿದ್ದು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ್ರತಿಯಾಗಿ ತಾಲಿಬಾನಿಗಳು ಪಾಕಿಸ್ತಾನ ಗಡಿಯಾಚೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು ಹಲವು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಪಾಕಿಸ್ತಾನ ವಾಯುಪಡೆಯು ಕಂದಹಾರ್ ಬಳಿಯ ಸ್ಪಿನ್ ಬೋಲ್ಡಾಕ್ ಪ್ರದೇಶಕ್ಕೆ ದಾಳಿ ನಡೆಸಿದೆ. ವಸತಿ ಪ್ರದೇಶದ ಮೇಲೆ ದಾಳಿ ಎಸಗಿದ್ದರಿಂದ ಮಕ್ಕಳು, ಮಹಿಳೆಯರು ಸೇರಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆಂದು ಅಫ್ಘಾನ್ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.
ಇದರ ಬೆನ್ನಲ್ಲೇ ಪಾಕ್ ಮತ್ತು ಅಫ್ಘಾನ್ ಸೇನಾಪಡೆಗಳು ಕದನ ವಿರಾಮ ಘೋಷಣೆ ಮಾಡಿದ್ದು, ಬುದವಾರ ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಈ ವಿರಾಮ ಇರಲಿದೆ. ಬುಧವಾರ ಕಾಬೂಲ್ ನಲ್ಲಿ ತೈಲ ಟ್ಯಾಂಕರ್ ಸ್ಫೋಟಿಸಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪಾಕಿಸ್ತಾನವು ಯುದ್ಧ ಕೊನೆಗೊಳಿಸುವುದಕ್ಕಾಗಿ ಕತಾರ್ ಮತ್ತು ಸೌದಿ ಅರೇಬಿಯಾವನ್ನು ಮಧ್ಯವರ್ತಿಯಾಗಿ ಬರುವಂತೆ ಕೇಳಿಕೊಂಡಿದೆ. ಮಾತುಕತೆ ಕಾರಣಕ್ಕೆ ಪಾಕ್ ಸಚಿವರು ಅಫ್ಘಾನ್ ಒಳಗೆ ಬರಬಾರದು ಎಂದು ತಾಲಿಬಾನ್ ಹೇಳಿಕೊಂಡಿದೆ.
ಕಳೆದೊಂದು ವಾರದಿಂದ ಉಭಯ ದೇಶಗಳ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಪಾಕ್ ವಾರದ ಹಿಂದೆ ಕಾಬೂಲಿನ ಟಿಟಿಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಮಿಲಿಟರಿಯು ಪಾಕ್ ಮೇಲೆ ಮುಗಿಬಿದ್ದಿದೆ. ಇದೇ ವೇಳೆ ಅಫ್ಘಾನ್ ವಿದೇಶಾಂಗ ಮಂತ್ರಿ ಮುತ್ತಾಕಿ ಭಾರತಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನ ವಿರುದ್ಧ ಕಾರ್ಯಾಚರಣೆಗೆ ಬಲ ಸಿಕ್ಕಂತಾಗಿದೆ.
Full-scale conflict has erupted between Pakistan and Afghanistan after the Pakistan Air Force carried out airstrikes on Kandahar’s Spin Boldak region, killing at least 15 civilians and injuring over 100. The attack targeted residential areas, leading to heavy civilian casualties, including women and children, according to Afghan government spokesperson Zabihullah Mujahid.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm