ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am