ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm