ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 03:04 pm
HK News Desk
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳಿಗೆ...
02-12-25 10:25 pm
ಭೂತಾನ್, ಮ್ಯಾನ್ಮಾರ್, ಶ್ರೀಲಂಕಾದಿಂದ ಕಳಪೆ ಅಡಿಕೆ...
01-12-25 10:18 pm
ಡಿಜಿಟಲ್ ಅರೆಸ್ಟ್ ಪ್ರಕರಣ ಹೆಚ್ಚಳ ; ಗಂಭೀರ ಪರಿಗಣಿಸ...
01-12-25 09:28 pm
03-12-25 04:52 pm
Mangalore Correspondent
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
Kapu Accident, Udupi, Five Killed: ಕಾಪು ಬಳಿ...
30-11-25 06:03 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm