ಬ್ರೇಕಿಂಗ್ ನ್ಯೂಸ್
20-10-25 08:34 pm HK News Desk ದೇಶ - ವಿದೇಶ
ಪಣಜಿ, ಅ.20: ಪ್ರಧಾನಿ ನರೇಂದ್ರ ಮೋದಿ ಅವರು ಗೋವಾದಲ್ಲಿರುವ ಐಎನ್ಎಸ್ ವಿಕ್ರಾಂತ್ ಯುದ್ಧ ನೌಕೆಯಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬದ ಆಚರಿಸಿದ್ದಾರೆ. ಇದೇ ವೇಳೆ, ಐಎನ್ಎಸ್ ವಿಕ್ರಾಂತ್, ಬ್ರಹ್ಮೋಸ್ ಕ್ಷಿಪಣಿ, ಬಲಿಷ್ಠ ಭಾರತೀಯ ಸೈನ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ನಮ್ಮ ಸರ್ಕಾರವು ಭಾರತವನ್ನು ಜಗತ್ತಿನ ಅತಿದೊಡ್ಡ ರಕ್ಷಣಾ ಸಲಕರಣೆ ರಫ್ತು ದೇಶವನ್ನಾಗಿಸುವ ಗುರಿಯನ್ನು ಹೊಂದಿದೆ. 2014 ರಿಂದ 40ಕ್ಕೂ ಅಧಿಕ ಯುದ್ಧ ನೌಕೆ ಹಾಗೂ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲಾಗಿದೆ. ಸ್ವದೇಶಿ ನಿರ್ಮಿತ ಬ್ರಹ್ಮೋಸ್ ಕ್ಷಿಪಣಿ ಬಗ್ಗೆ ಜಗತ್ತಿನಾದ್ಯಂತ ಭಾರೀ ಬೇಡಿಕೆ ಬಂದಿದೆ ಎಂದು ಹೇಳಿದ್ದಾರೆ.
ಪ್ರತಿಯೊಬ್ಬರು ತಮ್ಮ ಕುಟುಂಬದೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲು ಬಯಸುತ್ತಾರೆ. ನೀವು ನನ್ನ ಕುಟುಂಬವಿದ್ದಂತೆ. ನಿಮ್ಮೊಂದಿಗೆ ಈ ಹಬ್ಬವನ್ನು ಆಚರಿಸುತ್ತಿರುವುದು ಅತೀವ ಸಂತಸ ತಂದಿದೆ ಎಂದು ಹೇಳಿದ ಮೋದಿ, ಭಾರತದ ಮೊದಲ ಸ್ಥಳೀಯ ವಿಮಾನವಾಹಕ ನೌಕೆಯಾದ ಐಎನ್ಎಸ್ ವಿಕ್ರಾಂತ್ ಭಾರತದ ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಯುದ್ಧನೌಕೆಯಲ್ಲ, 21ನೇ ಶತಮಾನದಲ್ಲಿ ಭಾರತದ ಕಠಿಣ ಪರಿಶ್ರಮ, ಪ್ರತಿಭೆ, ಸಾಮರ್ಥ್ಯ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.





'ಕೆಲವೇ ತಿಂಗಳ ಹಿಂದೆ, ವಿಕ್ರಾಂತ್ ಹೇಗೆ ಪಾಕಿಸ್ತಾನವನ್ನು ನಿದ್ದೆಗೆಡಿಸುವಂತೆ ಮಾಡಿತ್ತು ಎಂದು ನಾವು ನೋಡಿದ್ದೇವೆ. ಭಾರತದ ನೌಕಾಪಡೆ ಹುಟ್ಟುಹಾಕಿದ "ಭಯ", ವಾಯುಪಡೆಯು ಪ್ರದರ್ಶಿಸಿದ "ಅಸಾಧಾರಣ ಕೌಶಲ್ಯ" ಮತ್ತು ಭೂಸೇನೆಯ "ಶೌರ್ಯ", ಮೂರೂ ಸೇನಾಪಡೆಗಳ "ಅಸಾಧಾರಣ ಸಮನ್ವಯ" ಆಪರೇಷನ್ ಸಿಂಧೂರ ಸಮಯದಲ್ಲಿ ಕೆಲವೇ ದಿನಗಳಲ್ಲಿ ಪಾಕಿಸ್ತಾನವನ್ನು ಮಂಡಿಯೂರುವಂತೆ ಮಾಡಿತ್ತು ಎಂದು ಸ್ಮರಿಸಿದರು.
ಆಪರೇಷನ್ ಸಿಂಧೂರ್ ಸಮಯದಲ್ಲಿ ಬ್ರಹ್ಮೋಸ್ ಮತ್ತು ಆಕಾಶ್ನಂತಹ ಕ್ಷಿಪಣಿಗಳು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿವೆ. ಇದರಿಂದಾಗಿ ಪ್ರಪಂಚದ ಹಲವು ದೇಶಗಳು ಈಗ ಈ ಕ್ಷಿಪಣಿಗಳನ್ನು ಖರೀದಿಸಲು ಆಸಕ್ತಿ ಹೊಂದಿವೆ ಎಂದರು. ನಾನು ಮಿಲಿಟರಿ ಉಪಕರಣಗಳ ಗಮನಿಸುತ್ತಿದ್ದೆ. ಈ ದೊಡ್ಡ ಹಡಗುಗಳು, ಗಾಳಿಗಿಂತ ವೇಗವಾಗಿ ಚಲಿಸುವ ವಿಮಾನಗಳು, ಜಲಾಂತರ್ಗಾಮಿ ನೌಕೆಗಳು ಪ್ರಭಾವಶಾಲಿಯಾಗಿವೆ, ಆದರೆ ಅವುಗಳನ್ನು ನಿಜವಾಗಿಯೂ ಪ್ರಭಾವಶಾಲಿಯಾಗಿಸಿದ್ದು ನಮ್ಮ ಯೋಧರ ಧೈರ್ಯ ಎಂದಿದ್ದಾರೆ.
Prime Minister Narendra Modi celebrated Diwali with Indian Navy personnel aboard the indigenous aircraft carrier INS Vikrant in Goa. During his address, he lauded the strength of India’s armed forces and emphasized the growing global demand for the homegrown BrahMos missile. Modi stated that since 2014, India has built over 40 warships and submarines and aims to become the world’s leading defense exporter.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm