ಬ್ರೇಕಿಂಗ್ ನ್ಯೂಸ್
21-10-25 03:11 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಅ.21 : ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ನಾಯಕ ಪಟ್ಟದಿಂದ ಕೆಳಗಿಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್ ಲತೀಫ್ ಹೇಳಿಕೆ ನೀಡಿದ್ದು ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ ಚರ್ಚೆಗೆ ಕಾರಣವಾಗಿದೆ.
ರಿಜ್ವಾನ್ ಅವರ ಜಾಗಕ್ಕೆ ಶಾಹೀನ್ ಶಾ ಅಫ್ರಿದಿಯನ್ನು ನೇಮಿಸಲಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೊಹಮ್ಮದ್ ರಿಜ್ವಾನ್ ಪ್ಯಾಲೆಸ್ತೀನ್ ಪರವಾಗಿ ಬಹಿರಂಗವಾಗಿ ಮಾತನಾಡಿದ್ದರು. ಈ ಕಾರಣಕ್ಕೆ ಅವರನ್ನು ನಾಯಕ ಸ್ಥಾನದಿಂದ ತೆಗೆಯಲಾಗಿದೆ ಎಂದು ಆರೋಪಿಸಿದರು.
ಕೋಚ್ ಮೈಕ್ ಹೆಸ್ಸನ್ ಅವರು ರಿಜ್ವಾನ್ ಅವರ ಡ್ರೆಸ್ಸಿಂಗ್ ರೂಮ್ ಸಂಸ್ಕೃತಿಯನ್ನು ಇಷ್ಟಪಡುತ್ತಿಲ್ಲ. ಇಸ್ಲಾಮಿಕ್ ದೇಶದಲ್ಲಿ ಇಸ್ಲಾಮಿಕ್ ಅಲ್ಲದ ನಾಯಕ ಬರಬೇಕು ಎಂಬ ಮನಸ್ಥಿತಿಯನ್ನು ಪಿಸಿಬಿ ಹೊಂದಿದೆ. ಪ್ಯಾಲೆಸ್ತೀನ್ ಧ್ವಜವನ್ನು ಬಹಿರಂಗವಾಗಿ ಪ್ರದರ್ಶನ ಮಾಡಿದ್ದಕ್ಕೆ ಅವರನ್ನು ತೆಗೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ಕಳಪೆ ಪ್ರದರ್ಶನ ನೀಡಿದ್ದಕ್ಕೆ ರಿಜ್ವಾನ್ ಅವರನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಇಳಿಸಿ ಶಾಹೀನ್ ಶಾ ಅಫ್ರಿದಿ ಅವರನ್ನು ಆಯ್ಕೆ ಮಾಡಲಾಗಿದೆ.
ಮೊಹಮ್ಮದ್ ರಿಜ್ವಾನ್ ಇಸ್ಲಾಂ ಮೌಲ್ಯಗಳ ಮೇಲೆ ಹೆಚ್ಚು ಗಮನ ಹರಿಸುತ್ತಾರೆ ಎಂದು ಪಾಕಿಸ್ತಾನ ಕ್ರಿಕೆಟಿಗ ಇಮಾಮ್ ಉಲ್ ಹಕ್ ಈ ಹಿಂದೆ ಹೇಳಿದ್ದರು. ಯಾವುದೇ ಹೋಟೆಲ್ಗೆ ಹೋದಾಗ ರಿಜ್ವಾನ್ ಮೊದಲು ನಮಾಜ್ ಕೊಠಡಿಯನ್ನು ಹುಡುಕುತ್ತಾರೆ. ನಮಾಜ್ ಮಾಡಲು ಕೋಣೆಯಲ್ಲಿ ಬಿಳಿ ಬಟ್ಟೆಯನ್ನು ಹಾಸುತ್ತಾರೆ. ಮುಸ್ಲಿಮೇತರರು ಕೋಣೆ ಪ್ರವೇಶಕ್ಕೆ ನಿರ್ಬಂಧ ಹೇರುತ್ತಾರೆ. ನಮಾಜ್ ಸಮಯಕ್ಕಾಗಿ ವಾಟ್ಸಪ್ ಗ್ರೂಪ್ ರಚನೆ ಮಾಡುತ್ತಾರೆ ಎಂದು ತಿಳಿಸಿದ್ದರು.
The Pakistan Cricket Board (PCB) has appointed Shaheen Shah Afridi as the new ODI captain, replacing Mohammad Rizwan. Former cricketer Rashid Latif alleged that Rizwan was removed for promoting Islam and expressing support for Palestine, a claim that has gone viral online. However, the PCB has officially denied these allegations, stating that the leadership change was based on performance and team strategy, not religious or political reasons.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm