ಬ್ರೇಕಿಂಗ್ ನ್ಯೂಸ್
23-10-25 03:39 pm HK News Desk ದೇಶ - ವಿದೇಶ
ಪಾಟ್ನಾ, ಅ.23 : ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟವು ಬಿಹಾರ ಚುನಾವಣೆ ಹಿನ್ನಲೆಯಲ್ಲಿ ಆರ್ಜೆಡಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.
ಒಕ್ಕೂಟದ ಎಲ್ಲ ಪಕ್ಷಗಳ ಸದಸ್ಯರು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ನ ಹಿರಿಯ ನಾಯಕ ಅಶೋಕ್ ಗೆಹಲೋತ್ ಮಾತನಾಡಿ, ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ ನಿರ್ಧಾರವನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಹೇಳಿದರು.
ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಿದರೆ ವಿಕಾಸಶೀಲ ಇನ್ಸಾನ್ ಪಕ್ಷದ(ವಿಐಪಿ) ಮುಖ್ಯಸ್ಥ ಮುಖೇಶ್ ಸಾಹ್ನಿ ಉಪ ಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರೆ. ಅದೇ ರೀತಿ ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕನಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂದು ಗೆಹ್ಲೋತ್ ಹೇಳಿದ್ದಾರೆ. ಬಿಹಾರದಲ್ಲಿ ನ.6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ನ.14ರಂದು ಫಲಿತಾಂಶ ಘೋಷಣೆಯಾಗಲಿದೆ.
ಈ ಬಾರಿ ಪ್ರಶಾಂತ್ ಕಿಶೋರ್ ಪಕ್ಷವು ಸ್ಪರ್ಧಿಸುತ್ತಿರುವುದರಿಂದ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟದ ಮತಗಳನ್ನು ವಿಭಜಿಸಿದಲ್ಲಿ ಇಂಡಿಯಾ ಕೂಟಕ್ಕೆ ಲಾಭವಾಗುವ ಸಾಧ್ಯತೆಯಿದೆ. ಅಲ್ಲದೆ, ಸುದೀರ್ಘ ಕಾಲದ ಸಿಎಂ ನಿತೀಶ್ ಕುಮಾರ್ ಆಡಳಿತ ವಿರೋಧಿ ಅಲೆ ಆರ್ ಜೆಡಿ ಪರವಾಗಿ ವಾಲಲಿದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಒಕ್ಕೂಟದ್ದಿದೆ.
The Congress-led INDIA alliance has officially announced RJD leader and former Deputy Chief Minister Tejashwi Yadav as its Chief Ministerial candidate for the upcoming Bihar Assembly elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm