ಬ್ರೇಕಿಂಗ್ ನ್ಯೂಸ್
28-12-20 04:51 pm Headline Karnataka News Network ದೇಶ - ವಿದೇಶ
ವುಹಾನ್, ಡಿ.28: ಕೊರೊನಾ ವೈರಸ್ ಸೋಂಕಿನ ಬಗ್ಗೆ ಮೊದಲ ಬಾರಿಗೆ ವರದಿ ಮಾಡಿದ್ದ ಸಿಟಿಜನ್ ಜರ್ನಲಿಸ್ಟ್ ಅನ್ನು ಚೀನಾದ ಕೋರ್ಟ್ ನಾಲ್ಕು ವರ್ಷದ ಜೈಲು ಶಿಕ್ಷೆ ವಿಧಿಸಿದೆ.
37 ವರ್ಷದ ಝಂಗ್ ಝಾನ್, ಕೋರ್ಟಿನಿಂದ ಶಿಕ್ಷೆಗೊಳಗಾದ ಮಹಿಳೆ. ಈಕೆ, ಚೀನಾದ ಶಾಂಘೈ ನಿವಾಸಿಯಾಗಿದ್ದು, ಕಳೆದ ಫೆಬ್ರವರಿ 1ರಂದು ವುಹಾನ್ ನಗರಕ್ಕೆ ಬಂದಿದ್ದಳು. ಅಲ್ಲಿನ ಸ್ಥಿತಿಯನ್ನು ನೋಡಿ ಅವಕ್ಕಾದ ಝಾನ್, ಸೋಂಕಿಗೊಳಗಾದ ಜನರು ಆಸ್ಪತ್ರೆಯಲ್ಲಿ ಕ್ಯೂ ನಿಂತಿರುವುದು, ಅಲ್ಲಿನ ಆಸ್ಪತ್ರೆಯ ಸ್ಥಿತಿಗತಿ ಮತ್ತು ನಗರದ ಬೀದಿಗಳು ಖಾಲಿ ಖಾಲಿಯಾಗಿರುವುದನ್ನು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಳು. ಅಲ್ಲೀ ವರೆಗೂ ಸೋಂಕಿನ ಬಗ್ಗೆ ಅಲ್ಲಿನ ಮಾಧ್ಯಮಗಳಾಗಲೀ, ಸರಕಾರವಾಗಲೀ ಹೊರ ಜಗತ್ತಿಗೆ ತಿಳಿಸಿರಲಿಲ್ಲ. ತಾನೇ ಸ್ವಂತ ಕಾಳಜಿಯಿಂದ ಮಾಡಿದ್ದ ವರದಿ ಈಗ ಆಕೆಯನ್ನು ಜೈಲಿಗೆ ಅಟ್ಟುವಂತೆ ಮಾಡಿದೆ.

ಇದಾಗುತ್ತಿದ್ದಂತೆ, ಝನ್ ಝಾಂಗ್ ನನ್ನು ಪೊಲೀಸರು ಬಂಧಿಸಿದ್ದರು. ಎಂಟು ತಿಂಗಳ ಬಂಧಿಸಿಟ್ಟು ಕೋರ್ಟಿನಲ್ಲಿ ವಾದ- ವಿವಾದ ನಡೆದು ಈಗ ತೀರ್ಪು ಹೊರಬಿದ್ದಿದೆ. ಅಭಿಪ್ರಾಯ ಸ್ವಾತಂತ್ರ್ಯದ ಹಕ್ಕನ್ನು ನಾನು ಚಲಾಯಿಸಿದ್ದೇನೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ ಎಂದು ಕೋರ್ಟಿನಲ್ಲಿ ಝಾಂಗ್ ಹೇಳಿಕೆ ನೀಡಿದ್ದಾಳೆ. ಆದರೆ, ಕೋರ್ಟ್ ಈ ವರದಿಯ ಬಗ್ಗೆ ಬೇರೆಯೇ ಅಭಿಪ್ರಾಯ ಪಟ್ಟಿದೆ. ಇಂಥ ವರದಿಯಿಂದ ಜನರ ನಡುವೆ ಸಂಘರ್ಷ, ಘರ್ಷಣೆಗೆ ಕಾರಣವಾಗಿದ್ದೀಯ ಎಂದು ಹೇಳಿದೆ. ಇದಕ್ಕಾಗಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.

ವುಹಾನ್ ನಗರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ವೈರಸ್, ಆಬಳಿಕ ಇಡೀ ಜಗತ್ತಿಗೆ ಹಬ್ಬಿದೆ. ಜಗತ್ತಿನಲ್ಲಿ 80 ಮಿಲಿಯ ಜನರಿಗೆ ಸೋಂಕು ಹರಡಿದರೆ, ಇದರಿಂದಾಗಿ 1.76 ಮಿಲಿಯ ಜನರು ಸಾವು ಕಂಡಿದ್ದಾರೆ. ಶಾಂಘೈ ನಗರದಲ್ಲಿ ಕೋರ್ಟ್ ವಿಚಾರಣೆ ನಡೆಯುತ್ತಿದ್ದಾಗ ಹೊರಭಾಗದಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು. ಸೋಂಕನ್ನು ಯಶಸ್ವಿಯಾಗಿ ನಿಭಾಯಿಸಿದ್ದಕ್ಕೆ ಚೀನಾದ ಮಾಧ್ಯಮಗಳು ಅಲ್ಲಿನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರನ್ನು ಹೊಗಳಿದೆ.
A Chinese citizen journalist who covered Wuhan's virus outbreak is facing up to five years in jail, according to newly released documents.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am