ಬ್ರೇಕಿಂಗ್ ನ್ಯೂಸ್
28-12-20 04:51 pm Headline Karnataka News Network ದೇಶ - ವಿದೇಶ
ವುಹಾನ್, ಡಿ.28: ಕೊರೊನಾ ವೈರಸ್ ಸೋಂಕಿನ ಬಗ್ಗೆ ಮೊದಲ ಬಾರಿಗೆ ವರದಿ ಮಾಡಿದ್ದ ಸಿಟಿಜನ್ ಜರ್ನಲಿಸ್ಟ್ ಅನ್ನು ಚೀನಾದ ಕೋರ್ಟ್ ನಾಲ್ಕು ವರ್ಷದ ಜೈಲು ಶಿಕ್ಷೆ ವಿಧಿಸಿದೆ.
37 ವರ್ಷದ ಝಂಗ್ ಝಾನ್, ಕೋರ್ಟಿನಿಂದ ಶಿಕ್ಷೆಗೊಳಗಾದ ಮಹಿಳೆ. ಈಕೆ, ಚೀನಾದ ಶಾಂಘೈ ನಿವಾಸಿಯಾಗಿದ್ದು, ಕಳೆದ ಫೆಬ್ರವರಿ 1ರಂದು ವುಹಾನ್ ನಗರಕ್ಕೆ ಬಂದಿದ್ದಳು. ಅಲ್ಲಿನ ಸ್ಥಿತಿಯನ್ನು ನೋಡಿ ಅವಕ್ಕಾದ ಝಾನ್, ಸೋಂಕಿಗೊಳಗಾದ ಜನರು ಆಸ್ಪತ್ರೆಯಲ್ಲಿ ಕ್ಯೂ ನಿಂತಿರುವುದು, ಅಲ್ಲಿನ ಆಸ್ಪತ್ರೆಯ ಸ್ಥಿತಿಗತಿ ಮತ್ತು ನಗರದ ಬೀದಿಗಳು ಖಾಲಿ ಖಾಲಿಯಾಗಿರುವುದನ್ನು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಳು. ಅಲ್ಲೀ ವರೆಗೂ ಸೋಂಕಿನ ಬಗ್ಗೆ ಅಲ್ಲಿನ ಮಾಧ್ಯಮಗಳಾಗಲೀ, ಸರಕಾರವಾಗಲೀ ಹೊರ ಜಗತ್ತಿಗೆ ತಿಳಿಸಿರಲಿಲ್ಲ. ತಾನೇ ಸ್ವಂತ ಕಾಳಜಿಯಿಂದ ಮಾಡಿದ್ದ ವರದಿ ಈಗ ಆಕೆಯನ್ನು ಜೈಲಿಗೆ ಅಟ್ಟುವಂತೆ ಮಾಡಿದೆ.

ಇದಾಗುತ್ತಿದ್ದಂತೆ, ಝನ್ ಝಾಂಗ್ ನನ್ನು ಪೊಲೀಸರು ಬಂಧಿಸಿದ್ದರು. ಎಂಟು ತಿಂಗಳ ಬಂಧಿಸಿಟ್ಟು ಕೋರ್ಟಿನಲ್ಲಿ ವಾದ- ವಿವಾದ ನಡೆದು ಈಗ ತೀರ್ಪು ಹೊರಬಿದ್ದಿದೆ. ಅಭಿಪ್ರಾಯ ಸ್ವಾತಂತ್ರ್ಯದ ಹಕ್ಕನ್ನು ನಾನು ಚಲಾಯಿಸಿದ್ದೇನೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ ಎಂದು ಕೋರ್ಟಿನಲ್ಲಿ ಝಾಂಗ್ ಹೇಳಿಕೆ ನೀಡಿದ್ದಾಳೆ. ಆದರೆ, ಕೋರ್ಟ್ ಈ ವರದಿಯ ಬಗ್ಗೆ ಬೇರೆಯೇ ಅಭಿಪ್ರಾಯ ಪಟ್ಟಿದೆ. ಇಂಥ ವರದಿಯಿಂದ ಜನರ ನಡುವೆ ಸಂಘರ್ಷ, ಘರ್ಷಣೆಗೆ ಕಾರಣವಾಗಿದ್ದೀಯ ಎಂದು ಹೇಳಿದೆ. ಇದಕ್ಕಾಗಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.

ವುಹಾನ್ ನಗರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ವೈರಸ್, ಆಬಳಿಕ ಇಡೀ ಜಗತ್ತಿಗೆ ಹಬ್ಬಿದೆ. ಜಗತ್ತಿನಲ್ಲಿ 80 ಮಿಲಿಯ ಜನರಿಗೆ ಸೋಂಕು ಹರಡಿದರೆ, ಇದರಿಂದಾಗಿ 1.76 ಮಿಲಿಯ ಜನರು ಸಾವು ಕಂಡಿದ್ದಾರೆ. ಶಾಂಘೈ ನಗರದಲ್ಲಿ ಕೋರ್ಟ್ ವಿಚಾರಣೆ ನಡೆಯುತ್ತಿದ್ದಾಗ ಹೊರಭಾಗದಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು. ಸೋಂಕನ್ನು ಯಶಸ್ವಿಯಾಗಿ ನಿಭಾಯಿಸಿದ್ದಕ್ಕೆ ಚೀನಾದ ಮಾಧ್ಯಮಗಳು ಅಲ್ಲಿನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರನ್ನು ಹೊಗಳಿದೆ.
A Chinese citizen journalist who covered Wuhan's virus outbreak is facing up to five years in jail, according to newly released documents.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm