ಬ್ರೇಕಿಂಗ್ ನ್ಯೂಸ್
01-11-25 07:27 pm HK News Desk ದೇಶ - ವಿದೇಶ
ಹೈದರಾಬಾದ್, ನ.1 : ಜೆಡ್ಡಾದಿಂದ ಹೈದರಾಬಾದ್ಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಾನವ ಬಾಂಬ್ ಇರಿಸಲಾಗಿದೆಯೆಂದು ಹೈದ್ರಾಬಾದ್ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಇದರ ಬೆನ್ನಲ್ಲೇ ವಿಮಾನವನ್ನು ಮುಂಬೈಗೆ ತಿರುಗಿಸಿ ಅಲ್ಲಿ ತುರ್ತಾಗಿ ಪರೀಕ್ಷೆಗೆ ಒಳಪಡಿಸಲಾಗಿದೆ.
ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ, ಅದರಲ್ಲಿ ವಿಮಾನ ಹೈದರಾಬಾದಿನಲ್ಲಿ ಲ್ಯಾಂಡ್ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಲಾಗಿತ್ತು. ಎಲ್ಟಿಟಿಇ- ಐಎಸ್ಐ ಉಗ್ರರು 1984ರ ಮದ್ರಾಸ್ ಏರ್ಪೋರ್ಟ್ ಬಾಂಬ್ ದಾಳಿ ರೀತಿಯಲ್ಲಿ ಸ್ಪೋಟಕ್ಕೆ ಯೋಜನೆ ಹಾಕಿದ್ದಾರೆ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸೌದಿಯ ಜೆಡ್ಡಾದಿಂದ ಬರುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲಾಗಿತ್ತು. ಅಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಭದ್ರತಾ ತಪಾಸಣೆ ನಡೆಸಲಾಗಿದ್ದು, ಯಾವುದೇ ಸಮಸ್ಯೆ ಕಂಡುಬಂದಿಲ್ಲ. ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.
ಇಂಡಿಗೋ ವಿಮಾನ 6E68 ಗೆ ಬೆದರಿಕೆ ಸಂದೇಶ ಬಂದಿದ್ದು, ವಿಮಾನವನ್ನು ಮುಂಬೈಗೆ ತಿರುಗಿಸಲಾಗಿದೆ. ಪ್ರಯಾಣಿಕರಿಗೆ ಉಪಹಾರದ ವ್ಯವಸ್ಥೆ ಸೇರಿದಂತೆ ಅನಾನೂಕೂಲ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಇಂಡಿಗೋ ಏರ್ಲೈನ್ ವಕ್ತಾರರು ತಿಳಿಸಿದ್ದಾರೆ.
A bomb threat email claiming that a human bomb was onboard an IndiGo flight from Jeddah to Hyderabad triggered panic early Saturday morning, prompting authorities to divert the aircraft to Mumbai for an emergency inspection.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm