ಬ್ರೇಕಿಂಗ್ ನ್ಯೂಸ್
02-11-25 05:13 pm HK News Desk ದೇಶ - ವಿದೇಶ
ತಿರುವನಂತಪುರಂ, ನ.2 : ಕೇರಳದಲ್ಲಿ ಎಡರಂಗ ಸರ್ಕಾರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು ಕೇರಳದ ಎಡರಂಗ ಸರ್ಕಾರ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದು, ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ ನೀಡಿದೆ ಎಂದು ಟೀಕಿಸಿದೆ.
ಆಯೋಗದ ಅಧ್ಯಕ್ಷ ಹನ್ಸ್ ರಾಜ್ ಅಹಿರ್, ಕೇರಳ ರಾಜ್ಯ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನಗಳನ್ನು ಧಾರ್ಮಿಕವಾಗಿ ಎರಡು ಗುಂಪುಗಳಿಗೆ ವಿಸ್ತರಿಸಲು ಯಾವ ಸಮೀಕ್ಷೆಯ ಮಾನದಂಡ ಇದೆ ಎಂಬುದನ್ನು ಸ್ಪಷ್ಟಪಡಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ. ಓಬಿಸಿ ಮೀಸಲಾತಿಯನ್ನು ಯಾವುದೇ ಧರ್ಮದ ಹೆಸರಿನಲ್ಲಿ ನೀಡುವುದು ಸರಿಯಲ್ಲ. ಒಂದೇ ಧರ್ಮದೊಳಗಿನ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿದ ನಂತರವೇ ಅದನ್ನು ನೀಡಬೇಕು ಎಂದು ಅವರು ಹೇಳಿದರು.
ಎಡರಂಗ ಸರ್ಕಾರದ ಈ ನಡೆಯನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಅಹಿರ್ ಹೇಳಿದ್ದಾರೆ. ಆಯೋಗವು ಕೇರಳ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಮತ್ತು ಅದನ್ನು 15 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದವರು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಓಬಿಸಿ ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದವರು ಹೇಳಿದರು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳನ್ನು ರಾಜ್ಯದ ಓಬಿಸಿ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಕೇರಳದಲ್ಲಿಯೂ ವಿರೋಧ ವ್ಯಕ್ತವಾಗಿದೆ.
The Left government in Kerala has sparked widespread opposition after deciding to extend OBC reservation benefits to Muslim and Christian communities, just months before the upcoming Assembly elections.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm