ಬ್ರೇಕಿಂಗ್ ನ್ಯೂಸ್
03-11-25 01:13 pm HK News Desk ದೇಶ - ವಿದೇಶ
ಮುಂಬೈ, ನ.3 : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಮಹಿಳಾ ವಿಶ್ವಕಪ್ 13ನೇ ಆವೃತ್ತಿಯಲ್ಲಿ ಚೊಚ್ಚಲ ಬಾರಿಗೆ ಭಾರತ ವನಿತೆಯರ ತಂಡ ಕಪ್ ಎತ್ತಿ ಹಿಡಿದಿದೆ. ಇದೇ ವೇಳೆ, ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಹೊಸ ರೀತಿಯಲ್ಲಿ ಸಂಭ್ರಮಾಚರಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದ್ದು 52 ರನ್ಗಳ ಜಯಭೇರಿ ಬಾರಿಸಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತು.
&imwidth=800&imheight=600&format=webp&quality=medium)



![]()
ವಿಶ್ವಕಪ್ ಟ್ರೋಫಿ ಪಡೆಯುತ್ತಲೇ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಹೊಸ ರೀತಿಯ ಸೆಲೆಬ್ರೇಷನ್ಗೆ ನಾಂದಿ ಹಾಡಿದ್ದಾರೆ. ಈ ಹಿಂದೆ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ರೊಬೋಟ್ ವಾಕ್ ಮಾಡಿ ಸಂಭ್ರಮಿಸಿದ್ದರು. ಹರ್ಮನ್ ಪ್ರೀತ್ ಕೂಡ ಅದೇ ರೀತಿ ವಿಶಿಷ್ಟವಾಗಿ ಸಂಭ್ರಮಾಚಣೆ ಮಾಡಿದ್ದಾರೆ. ಹರ್ಮನ್ ಪ್ರೀತ್ ಐಸಿಸಿ ಅಧ್ಯಕ್ಷ ಜಯ್ ಶಾರಿಂದ ಟ್ರೋಫಿ ಪಡೆದು ಸಹ ಆಟಗಾರ್ತಿಯರತ್ತ ತೆರಳುತ್ತಾ ಟ್ರೋಫಿ ಬೇಕಾ.. ಬೇಕಾ... ಕೊಡಲ್ಲ ಎನ್ನುತ್ತ ಹಿಂದೆ ಮುಂದೆ ಹೋಗಿ ಬಳಿಕ ಒಟ್ಟಾಗಿ ಎತ್ತಿಹಿಡಿದು ಸಂಭ್ರಮಿಸಿದ್ದಾರೆ. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿದೆ.
Team India’s women cricketers have created history by winning the ICC Women’s One Day World Cup for the first time ever. The video of captain Harmanpreet Kaur’s unique celebration after lifting the trophy has now gone viral on social media.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am