ಬ್ರೇಕಿಂಗ್ ನ್ಯೂಸ್
06-11-25 10:22 pm HK News Desk ದೇಶ - ವಿದೇಶ
ನವದೆಹಲಿ, ನ.6 : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಅಥವಾ ನಾಯಕತ್ವ ಬದಲಾವಣೆಯ ವದಂತಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ತಳ್ಳಿಹಾಕಿದ್ದು, 2028 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಾಗ ಮಾತ್ರ ಕ್ರಾಂತಿ ಎಂದು ಗುರುವಾರ ಸ್ಪಷ್ಟಪಡಿಸಿದ್ದಾರೆ.
ತಮ್ಮನ್ನು ತಾವು ಪಕ್ಷದ "ಶಿಸ್ತಿನ ಸಿಪಾಯಿ" ಎಂದು ಹೇಳಿಕೊಂಡಿರುವ ಡಿಕೆ ಶಿವಕುಮಾರ್, ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ಯಾವುದೇ ಕ್ರಾಂತಿಯನ್ನು ನಿರಾಕರಿಸಿದ್ದಾರೆ.
ನಾನು ಇಲ್ಲಿ ಯಾರನ್ನೂ ಭೇಟಿಯಾಗುತ್ತಿಲ್ಲ. ಸಚಿವ ಸಂಪುಟ ಪುನರ್ರಚನೆ ಬಗ್ಗೆ ನನ್ನೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಅದು ಸಿಎಂ ಅವರ ವಿಶೇಷ ಹಕ್ಕು. ಅವರು ಅದನ್ನು ಮಾಡಲಿ ಎಂದು ಡಿಕೆಶಿ ದೆಹಲಿಯಲ್ಲಿ ಹೇಳಿದ್ದಾರೆ. ನನಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಯೋಜನೆ ಇಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತ ಗಳ್ಳತನ ವಿಚಾರವಾಗಿ ನಿನ್ನೆ ರಾತ್ರಿಯೂ ಸಭೆ ಮಾಡಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ನಾನು ಏನಾದರೂ ಹೇಳಿದ್ದೇನಾ? ಸಿಎಂ ಏನಾದರೂ ಹೇಳಿದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದಿದ್ದಾರೆ.
ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಇರಬೇಕೆಂದು ಹೇಳಿದರೆ, ಅವರು ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕೆಂದರೆ, ಅವರು ಹತ್ತು ವರ್ಷಗಳ ಕಾಲ ಇರುತ್ತಾರೆ. 15 ವರ್ಷ ಇರಬೇಕಿದ್ದರೆ, 15 ವರ್ಷಗಳ ಕಾಲ ಇರುತ್ತಾರೆ. ನಮಗೆ ಪಕ್ಷದಿಂದ ನೀಡಿದ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ ಎಂದು ಹೇಳಿದರು. ನವೆಂಬರ್ ಕ್ರಾಂತಿಯ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, "ನವೆಂಬರ್ ಅಥವಾ ಡಿಸೆಂಬರ್, ಜನವರಿ, ಫೆಬ್ರವರಿಯಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ. ಅದು ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಾಗ ಮಾತ್ರ ಕ್ರಾಂತಿಯಾಗುತ್ತದೆ ಎಂದರು.
Deputy Chief Minister DK Shivakumar refuted speculation about a leadership change in Karnataka, asserting that both he and Chief Minister Siddaramaiah are committed to the party’s decision. He said any “revolution” would only happen when Congress wins again in 2028.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm