ಬ್ರೇಕಿಂಗ್ ನ್ಯೂಸ್
07-11-25 05:21 pm HK News Desk ದೇಶ - ವಿದೇಶ
ತಿರುವನಂತಪುರಂ, ನ.7 : ಎರಡನೇ ಮದುವೆಯನ್ನು ರಿಜಿಸ್ಟರ್ ಮಾಡಲು ನಿರಾಕರಿಸಿದ ಸ್ಥಳೀಯಾಡಳಿತದ ನಿರ್ಧಾರವನ್ನು ಎತ್ತಿಹಿಡಿದಿರುವ ಕೇರಳ ಹೈಕೋರ್ಟ್, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಉದ್ದೇಶಿಸಿ ಧರ್ಮದ ಪ್ರಾಶಸ್ತ್ಯ ಎರಡನೇಯದ್ದು. ಈ ದೇಶದಲ್ಲಿ ಸಂವಿಧಾನಕ್ಕೇ ಮೊದಲ ಪ್ರಾಶಸ್ತ್ಯ ಎಂದು ಹೇಳಿದೆ.
ಕಣ್ಣೂರಿನ 44 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೊದಲ ಮದುವೆಯನ್ನು ರಿಜಿಸ್ಟರ್ ಮಾಡಿದ್ದು 2017ರಲ್ಲಿ ಎರಡನೇ ಮದುವೆಯಾಗಿದ್ದ. ಎರಡನೇ ಪತ್ನಿಗೆ ಮತ್ತೆರಡು ಮಕ್ಕಳಾಗಿತ್ತು. ಗಂಡನ ಆಸ್ತಿಯಲ್ಲಿ ಪತ್ನಿ ಮತ್ತು ಮಕ್ಕಳಿಗೆ ಸಮಾನ ಹಕ್ಕು ಪಡೆಯುವುದಕ್ಕಾಗಿ ಕಾನೂನು ಪ್ರಕಾರ, ಮದುವೆ ರಿಜಿಸ್ಟರ್ ಆಗಿರಬೇಕಾಗುತ್ತದೆ. ಇದರಂತೆ, ಸ್ಥಳೀಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎರಡನೇ ಮದುವೆಯನ್ನು ನೋಂದಣಿ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ ನೋಂದಣಾಧಿಕಾರಿ ಎರಡನೇ ಮದುವೆಯ ನೋಂದಣಿಗೆ ಕಾನೂನು ಪ್ರಕಾರ ನಿರಾಕರಿಸಿದ್ದರು.
ನಿರಾಕರಣೆಯನ್ನು ಪ್ರಶ್ನಿಸಿ ದಂಪತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಧೀಶ ಪಿ.ವಿ.ಕುಂಞಕೃಷ್ಣನ್ ಅರ್ಜಿಯನ್ನು ವಜಾ ಮಾಡಿದ್ದಲ್ಲದೆ, ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಎರಡನೇ ಮದುವೆಗೆ ಅವಕಾಶ ಇರಬಹುದು. ಆದರೆ ಎರಡನೇ ಮದುವೆಯನ್ನು ನೋಂದಣಿ ಮಾಡಬೇಕೆಂದಿದ್ದರೆ ಅದಕ್ಕೆ ಈ ನೆಲದ ಕಾನೂನು ಒಪ್ಪಬೇಕು. ಆಗ ಮೊದಲ ಪತ್ನಿಯ ಅವಶ್ಯಕತೆ ಪ್ರಶ್ನೆ ಬರುತ್ತದೆ.
ಇಂತಹ ಸಂದರ್ಭದಲ್ಲಿ ಧರ್ಮದ ಪ್ರಾಶಸ್ತ್ಯ ಸೆಕಂಡರಿಯಾಗುತ್ತದೆ, ಸಂವಿಧಾನ ಕೊಟ್ಟಿರುವ ಕಾನೂನೇ ಧರ್ಮಕ್ಕಿಂತ ಮಿಗಿಲಾಗುತ್ತದೆ. ಇದೊಂದು ರೀತಿಯಲ್ಲಿ ನೈಸರ್ಗಿಕ ನ್ಯಾಯದ ಮೂಲಭೂತ ತತ್ವವಾಗಿರುತ್ತದೆ. ನ್ಯಾಯಾಲಯ ಯಾವುದೇ ವ್ಯಕ್ತಿಯ ಭಾವನೆಯನ್ನು ತಳ್ಳಿಹಾಕಲಾಗದು. ಇಲ್ಲಿ ಎರಡನೇ ಮದುವೆಯನ್ನು ನೋಂದಣಿ ಮಾಡುವ ಸಂದರ್ಭದಲ್ಲಿ ಮೊದಲ ಪತ್ನಿಯ ಭಾವನೆಯು ಮುಖ್ಯವಾಗುತ್ತದೆ.
ಧರ್ಮ ಗ್ರಂಥ ಕುರಾನ್ ಅಥವಾ ವೈಯಕ್ತಿಕ ಕಾನೂನು ಮಂಡಳಿ ಮೊದಲ ಪತ್ನಿ ಇರುವಾಗ ಇನ್ನೊಬ್ಬಳ ಜೊತೆಗೆ ಸಂಬಂಧ ಹೊಂದುವುದನ್ನು, ಎರಡನೇ ಪತ್ನಿಯನ್ನು ಇರಿಸಿಕೊಳ್ಳುವುದನ್ನು ಒಪ್ಪುತ್ತದೆಯೇ ಎಂದು ನಂಗನಿಸುತ್ತಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸುವುದು, ವೈವಾಹಿಕ ಸಂಬಂಧಗಳಲ್ಲಿ ಸಮಾನತೆ ಕಾಯ್ದುಕೊಳ್ಳುವುದನ್ನು ಕುರಾನ್ ಹೇಳುತ್ತದೆ ಎನ್ನುವುದು ನನ್ನ ಭಾವನೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಇದಲ್ಲದೆ, ಇಂತಹ ಪ್ರಕರಣಗಳಲ್ಲಿ ಮೊದಲ ಪತ್ನಿ ಕೇವಲ ಮೂಕಪ್ರೇಕ್ಷಕನಾಗಿ ಇರಬೇಕೆಂದು ಹೇಳುವುದಿಲ್ಲ. ಗಂಡ ಎರಡನೇ ಮದುವೆಯನ್ನು ನೋಂದಣಿ ಮಾಡುವ ಸಂದರ್ಭದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶ ಇರುತ್ತದೆ. ನೋಂದಣಿಗೆ ಅರ್ಜಿ ಹಾಕುವಾಗಲೇ ನೋಂದಣಾಧಿಕಾರಿ, ಮೊದಲ ಪತ್ನಿ ಜೀವಂತ ಇದ್ದರೆ ಆಕೆಗೆ ನೋಟೀಸ್ ಮಾಡಿ ಅಹವಾಲು ಕೇಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
The Kerala High Court has upheld a local authority’s decision to refuse registration of a Muslim man’s second marriage, emphasizing that in India, the Constitution holds primacy over religion.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm