ಬ್ರೇಕಿಂಗ್ ನ್ಯೂಸ್
10-11-25 03:04 pm HK News Desk ದೇಶ - ವಿದೇಶ
ನವದೆಹಲಿ, ನ.10 : ಬಂಧಿತ ಕಾಶ್ಮೀರಿ ವೈದ್ಯನೊಬ್ಬ ನೀಡಿದ ಮಾಹಿತಿ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರೀದಾಬಾದ್ನಲ್ಲಿ 300 ಕಿಲೋ ಆರ್ಡಿಎಕ್ಸ್, ಒಂದು ಎಕೆ -47 ರೈಫಲ್ ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಭಯೋತ್ಪಾದಕರ ನಂಟು ಆರೋಪದಲ್ಲಿ ಬಂಧಿತನಾಗಿದ್ದ ಡಾ.ಆದಿಲ್ ಅಹ್ಮದ್ ರಾಥರ್ ನೀಡಿದ ಮಾಹಿತಿ ಆಧರಿಸಿ ಸ್ಫೋಟಕಗಳನ್ನು ವಶಪಡಿಸಲಾಗಿದೆ. ಪೊಲೀಸರು ಕಾಶ್ಮೀರ ಕಣಿವೆಯಲ್ಲಿ ವೈದ್ಯನಿಗೆ ಸೇರಿದ ಲಾಕರ್ನಿಂದ ಎಕೆ -47 ರೈಫಲ್ ಮತ್ತು ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು. ಪೊಲೀಸರು ಆರೋಪಿಯನ್ನು ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ಸಾಗಣೆ ಆರೋಪದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಪುಲ್ವಾಮಾ ಜಿಲ್ಲೆಯ ನಿವಾಸಿ ಶಕೀಲ್ ಅಹ್ಮದ್ ಎಂಬವರ ಪುತ್ರ ಮುಜಾಮಿಲ್ ಶಕೀಲ್ ಎಂಬ ಮತ್ತೊಬ್ಬ ವೈದ್ಯನ ಪಾತ್ರವೂ ಇದೇ ವೇಳೆ ಬಹಿರಂಗಗೊಂಡಿದೆ. ಫರೀದಾಬಾದ್ನಲ್ಲಿ ವಶಪಡಿಸಿದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಡಾ. ಮುಜಾಮಿಲ್ ಸಹಾಯ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ರಾಥರ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಆರೋಪ ಹೊರಿಸಲಾಗಿದೆ. ವೈದ್ಯನೊಬ್ಬ ಬಂಧನ ಆಗಿರುವುದು ಭಯೋತ್ಪಾದನಾ ಜಾಲದಲ್ಲಿ ಉನ್ನತ ಶಿಕ್ಷಣ ಪಡೆದ ವೃತ್ತಿಪರರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂಬುದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ರಾಜಧಾನಿ ದೆಹಲಿ ಹತ್ತಿರದಲ್ಲೇ ಇಷ್ಟೊಂದು ದೊಡ್ಡ ಪ್ರಮಾಣದ ಸ್ಫೋಟಕಗಳನ್ನ ಸಾಗಿಸಿದ್ದು ಹೇಗೆಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
Acting on information provided by a detained Kashmiri doctor, Jammu and Kashmir Police have seized 300 kilograms of RDX, an AK-47 rifle, and a large quantity of ammunition from Faridabad, near the national capital New Delhi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am