ಬ್ರೇಕಿಂಗ್ ನ್ಯೂಸ್
10-11-25 03:04 pm HK News Desk ದೇಶ - ವಿದೇಶ
ನವದೆಹಲಿ, ನ.10 : ಬಂಧಿತ ಕಾಶ್ಮೀರಿ ವೈದ್ಯನೊಬ್ಬ ನೀಡಿದ ಮಾಹಿತಿ ಮೇರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರೀದಾಬಾದ್ನಲ್ಲಿ 300 ಕಿಲೋ ಆರ್ಡಿಎಕ್ಸ್, ಒಂದು ಎಕೆ -47 ರೈಫಲ್ ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಭಯೋತ್ಪಾದಕರ ನಂಟು ಆರೋಪದಲ್ಲಿ ಬಂಧಿತನಾಗಿದ್ದ ಡಾ.ಆದಿಲ್ ಅಹ್ಮದ್ ರಾಥರ್ ನೀಡಿದ ಮಾಹಿತಿ ಆಧರಿಸಿ ಸ್ಫೋಟಕಗಳನ್ನು ವಶಪಡಿಸಲಾಗಿದೆ. ಪೊಲೀಸರು ಕಾಶ್ಮೀರ ಕಣಿವೆಯಲ್ಲಿ ವೈದ್ಯನಿಗೆ ಸೇರಿದ ಲಾಕರ್ನಿಂದ ಎಕೆ -47 ರೈಫಲ್ ಮತ್ತು ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು. ಪೊಲೀಸರು ಆರೋಪಿಯನ್ನು ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ಸಾಗಣೆ ಆರೋಪದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಪುಲ್ವಾಮಾ ಜಿಲ್ಲೆಯ ನಿವಾಸಿ ಶಕೀಲ್ ಅಹ್ಮದ್ ಎಂಬವರ ಪುತ್ರ ಮುಜಾಮಿಲ್ ಶಕೀಲ್ ಎಂಬ ಮತ್ತೊಬ್ಬ ವೈದ್ಯನ ಪಾತ್ರವೂ ಇದೇ ವೇಳೆ ಬಹಿರಂಗಗೊಂಡಿದೆ. ಫರೀದಾಬಾದ್ನಲ್ಲಿ ವಶಪಡಿಸಿದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಡಾ. ಮುಜಾಮಿಲ್ ಸಹಾಯ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
ರಾಥರ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಆರೋಪ ಹೊರಿಸಲಾಗಿದೆ. ವೈದ್ಯನೊಬ್ಬ ಬಂಧನ ಆಗಿರುವುದು ಭಯೋತ್ಪಾದನಾ ಜಾಲದಲ್ಲಿ ಉನ್ನತ ಶಿಕ್ಷಣ ಪಡೆದ ವೃತ್ತಿಪರರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂಬುದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ರಾಜಧಾನಿ ದೆಹಲಿ ಹತ್ತಿರದಲ್ಲೇ ಇಷ್ಟೊಂದು ದೊಡ್ಡ ಪ್ರಮಾಣದ ಸ್ಫೋಟಕಗಳನ್ನ ಸಾಗಿಸಿದ್ದು ಹೇಗೆಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
Acting on information provided by a detained Kashmiri doctor, Jammu and Kashmir Police have seized 300 kilograms of RDX, an AK-47 rifle, and a large quantity of ammunition from Faridabad, near the national capital New Delhi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm